<p><strong>ಅರಾರಿಯಾ (ಬಿಹಾರ)</strong>: ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗ ಕುಸಿದಿದೆ.</p><p>ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಹಾರ ರಾಜ್ಯಸರ್ಕಾರದಿಂದ ಹೊಸದಾಗಿ ಈ ಸೇತುವೆ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಇನ್ನೂ ಮುಕ್ತವಾಗಿರಲಿಲ್ಲ. ಅಲ್ಲದೆ ಸೇತುವೆಯನ್ನು ಸಂಪರ್ಕಿಸುವ ರಸ್ತೆಯೂ ನಿರ್ಮಾಣವಾಗಿರಲಿಲ್ಲ.</p><p>ಈ ಸೇತುವೆ ಅರಾರಿಯ ಜಿಲ್ಲೆಯ ಕುರ್ಸಾ ಕಾಂತ ಮತ್ತು ಸಿಕ್ತ್ಯ ಪ್ರದೇಶಗಳನ್ನು ಸಂಪರ್ಕಿಸುತ್ತಿತ್ತು.</p><p>ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು ‘ಹೊಸದಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗ ಕುಸಿದಿದೆ. ಪರಿಶೀಲನೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ’ ಎಂದರು.</p><p>‘ನಿರ್ಮಾಣ ಸಂಸ್ಥೆಯ ಮಾಲೀಕನ ನಿರ್ಲಕ್ಷದಿಂದಾಗಿ ಸೇತುವೆ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದು ಸ್ಥಳೀಯ ಶಾಸಕಿ ವಿಜಯ ಕುಮಾರಿ ಎಎನ್ಐಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಾರಿಯಾ (ಬಿಹಾರ)</strong>: ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗ ಕುಸಿದಿದೆ.</p><p>ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಹಾರ ರಾಜ್ಯಸರ್ಕಾರದಿಂದ ಹೊಸದಾಗಿ ಈ ಸೇತುವೆ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಇನ್ನೂ ಮುಕ್ತವಾಗಿರಲಿಲ್ಲ. ಅಲ್ಲದೆ ಸೇತುವೆಯನ್ನು ಸಂಪರ್ಕಿಸುವ ರಸ್ತೆಯೂ ನಿರ್ಮಾಣವಾಗಿರಲಿಲ್ಲ.</p><p>ಈ ಸೇತುವೆ ಅರಾರಿಯ ಜಿಲ್ಲೆಯ ಕುರ್ಸಾ ಕಾಂತ ಮತ್ತು ಸಿಕ್ತ್ಯ ಪ್ರದೇಶಗಳನ್ನು ಸಂಪರ್ಕಿಸುತ್ತಿತ್ತು.</p><p>ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು ‘ಹೊಸದಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗ ಕುಸಿದಿದೆ. ಪರಿಶೀಲನೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ’ ಎಂದರು.</p><p>‘ನಿರ್ಮಾಣ ಸಂಸ್ಥೆಯ ಮಾಲೀಕನ ನಿರ್ಲಕ್ಷದಿಂದಾಗಿ ಸೇತುವೆ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದು ಸ್ಥಳೀಯ ಶಾಸಕಿ ವಿಜಯ ಕುಮಾರಿ ಎಎನ್ಐಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>