ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ವರದಕ್ಷಿಣೆ ಕಿರುಕುಳದಿಂದಾಗಿ ನವವಿವಾಹಿತೆ ಸಾವು

Last Updated 7 ಏಪ್ರಿಲ್ 2023, 10:36 IST
ಅಕ್ಷರ ಗಾತ್ರ

ಬುಡೌನ್(ಉತ್ತರ ಪ್ರದೇಶ): 20 ವರ್ಷದ ನವವಿವಾಹಿತೆಯನ್ನು ಆಕೆಯ ಅತ್ತೆ, ವರದಕ್ಷಿಣೆಗಾಗಿ ಕತ್ತು ಹಿಸುಕಿ ಕೊಂದಿರುವ ಘಟನೆ ಇಲ್ಲಿನ ಪೈಗಾ-ಭಿಕಂಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರೇಲಿ ಜಿಲ್ಲೆಯ ಬಿಶರತ್‌ಗಂಜ್ ಲಾಹೋರಿ ಗ್ರಾಮದ ನಿವಾಸಿ ರೇಣು(ಸಂತ್ರಸ್ತೆ) ಅವರು ಒಂಬತ್ತು ತಿಂಗಳ ಹಿಂದೆ ಬಿಸೌಲಿಯ ಪೈಗಾ-ಭಿಕಂಪುರ ಗ್ರಾಮದ ನಿವಾಸಿ ವಿಕೇಶ್ ಅವರನ್ನು ವಿವಾಹವಾಗಿದ್ದರು.

ಮೃತ ಮಹಿಳೆಯ ಪತಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿಕೇಶ್ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆಗಾಗಿ ಸಂತ್ರಸ್ತೆಗೆ ಕಿರುಕುಳ ನೀಡುತ್ತಿದ್ದರು. ಗುರುವಾರ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಸಂತ್ರಸ್ತೆಯ ಸಂಬಂಧಿಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಸಂಜೀವ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT