<p><strong>ಜೈಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ತಿರುಚಿದ್ದ ವಿಡಿಯೊ ಹಂಚಿಕೊಂಡಿರುವ ಆರೋಪದಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ರಾಜ್ಯವರ್ಧನ ಸಿಂಗ್ ರಾಥೋಡ್, ಟಿ.ವಿ ವಾಹಿನಿಯ ನಿರೂಪಕ ಹಾಗೂ ಇತರರ ವಿರುದ್ಧ ಶನಿವಾರ ಇಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಸ್ಥಳೀಯ ಕಾಂಗ್ರೆಸ್ ಮುಖಂಡ ರಾಮ್ ಸಿಂಗ್ ಅವರು ಬನಿಪಾರ್ಕ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p>ಝೀ ನ್ಯೂಸ್ ವಾಹಿನಿಯ ನಿರೂಪಕ ರೋಹಿತ್ ರಂಜನ್ ಅವರು, ಎಸ್ಎಫ್ಐ ಕಾರ್ಯಕರ್ತರ ಕುರಿತುರಾಹುಲ್ ಗಾಂಧಿ ಮಾತನಾಡಿರುವ ವಿಡಿಯೊವನ್ನು ವಾಹಿನಿಯಲ್ಲಿ ಪ್ರಸಾರ ಮಾಡಿ ಅದನ್ನು ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಅನ್ವಯಿಸಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/india-news/cong-rejects-report-claiming-rahul-sought-aiadmks-support-for-sinha-950959.html" itemprop="url" target="_blank">ರಾಷ್ಟ್ರಪತಿ ಚುನಾವಣೆಗಾಗಿ ಎಐಡಿಎಂಕೆ ಬೆಂಬಲ ಕೋರಿಲ್ಲ: ವರದಿ ಅಲ್ಲಗಳೆದ ಕಾಂಗ್ರೆಸ್</a></strong></em></p>.<p>ಈ ವಿಚಾರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಟಿ.ವಿ. ವಾಹಿನಿಯನ್ನು ಟೀಕಿಸಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ.</p>.<p>ರಾಜ್ಯವರ್ಧನ ರಾಥೋಡ್, ಮೇಜರ್ ಸುರೇಂದ್ರ ಪೂನಿಯಾ (ನಿವೃತ್ತ) ಮತ್ತು ಕಮಲೇಶ್ ಸೈನಿ ಜೊತೆ ಸೇರಿ ಮಾಧ್ಯಮ ಸಂಸ್ಥೆಯು ಪಿತೂರಿ ನಡೆಸಿದೆ. ಇವರೆಲ್ಲರೂ ಟ್ವಿಟರ್ನಲ್ಲಿ ಈ ತಿರುಚಿದ್ದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದೂ ದೂರಿನಲ್ಲಿ ಹೇಳಲಾಗಿದೆ.</p>.<p>‘ರಾಹುಲ್ ಗಾಂಧಿ ಅವರು ವಯನಾಡಿನ ಯುವಕರನ್ನು ಉದ್ದೇಶಿಸಿ ಮಾಡತನಾಡಿದ್ದರು ಎಂಬುದು ಟಿ.ವಿ ವಾಹಿನಿಯ ನಿರೂಪಕರಿಗೆ ತಿಳಿದಿತ್ತು ಎಂದೂ ದೂರಿದ್ದಾರೆ.</p>.<p>ಕೇರಳದಲ್ಲಿ ತಮ್ಮ ಸಂಸದರ ಕಚೇರಿ ಗುರಿಯಾಗಿಸಿ ಗಲಾಟೆ ಮಾಡಿದ್ದ ಎಸ್ಎಫ್ಐ ಕಾರ್ಯಕರ್ತರನ್ನು ಕ್ಷಮಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಯನ್ನು ತಿರುಚಿ ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಅನ್ವಯಿಸಿ ಹೇಳಿದಂತೆ ವಿಡಿಯೊವನ್ನು ರೂಪಿಸಿದ್ದು, ಬಿಜೆಪಿಯ ಹಲವು ಮುಖಂಡರು ಇದನ್ನು ಹಂಚಿಕೊಂಡಿದ್ದರು.</p>.<p>ತಿರುಚಿದ್ದ ವಿಡಿಯೊ ಪ್ರಸಾರ ಮಾಡಿದ್ದಕ್ಕಾಗಿ ಟಿ.ವಿ ವಾಹಿನಿಯು ಕ್ಷಮೆ ಕೋರಿತ್ತು.</p>.<p><strong>ಓದಿ...</strong></p>.<p><a href="https://www.prajavani.net/district/udupi/maruti-swift-car-accident-near-maravanthe-beach-kundapura-udupi-district-950938.html" target="_blank">ಮರವಂತೆ ಬೀಚ್ ಬಳಿ ಅರಬ್ಬಿ ಸಮುದ್ರಕ್ಕೆ ಉರುಳಿದಕಾರು: ಚಾಲಕಸಾವು, ಇಬ್ಬರಿಗೆ ಗಾಯ</a></p>.<p><a href="https://www.prajavani.net/district/koppal/medical-college-student-died-after-being-hit-by-a-train-in-koppal-950955.html" target="_blank">ಕೊಪ್ಪಳ: ರೈಲಿಗೆ ಸಿಲುಕಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಸಾವು</a></p>.<p><a href="https://www.prajavani.net/district/koppal/government-school-teacher-arrested-for-sexually-harrassing-womens-950949.html" target="_blank">ಕೊಪ್ಪಳ: ಮಹಿಳೆಯರ ಜೊತೆ ಅಸಭ್ಯ ವರ್ತನೆ, ತಲೆ ಮರೆಸಿಕೊಂಡಿದ್ದ ಶಿಕ್ಷಕನ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ತಿರುಚಿದ್ದ ವಿಡಿಯೊ ಹಂಚಿಕೊಂಡಿರುವ ಆರೋಪದಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ರಾಜ್ಯವರ್ಧನ ಸಿಂಗ್ ರಾಥೋಡ್, ಟಿ.ವಿ ವಾಹಿನಿಯ ನಿರೂಪಕ ಹಾಗೂ ಇತರರ ವಿರುದ್ಧ ಶನಿವಾರ ಇಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಸ್ಥಳೀಯ ಕಾಂಗ್ರೆಸ್ ಮುಖಂಡ ರಾಮ್ ಸಿಂಗ್ ಅವರು ಬನಿಪಾರ್ಕ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p>ಝೀ ನ್ಯೂಸ್ ವಾಹಿನಿಯ ನಿರೂಪಕ ರೋಹಿತ್ ರಂಜನ್ ಅವರು, ಎಸ್ಎಫ್ಐ ಕಾರ್ಯಕರ್ತರ ಕುರಿತುರಾಹುಲ್ ಗಾಂಧಿ ಮಾತನಾಡಿರುವ ವಿಡಿಯೊವನ್ನು ವಾಹಿನಿಯಲ್ಲಿ ಪ್ರಸಾರ ಮಾಡಿ ಅದನ್ನು ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಅನ್ವಯಿಸಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/india-news/cong-rejects-report-claiming-rahul-sought-aiadmks-support-for-sinha-950959.html" itemprop="url" target="_blank">ರಾಷ್ಟ್ರಪತಿ ಚುನಾವಣೆಗಾಗಿ ಎಐಡಿಎಂಕೆ ಬೆಂಬಲ ಕೋರಿಲ್ಲ: ವರದಿ ಅಲ್ಲಗಳೆದ ಕಾಂಗ್ರೆಸ್</a></strong></em></p>.<p>ಈ ವಿಚಾರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಟಿ.ವಿ. ವಾಹಿನಿಯನ್ನು ಟೀಕಿಸಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ.</p>.<p>ರಾಜ್ಯವರ್ಧನ ರಾಥೋಡ್, ಮೇಜರ್ ಸುರೇಂದ್ರ ಪೂನಿಯಾ (ನಿವೃತ್ತ) ಮತ್ತು ಕಮಲೇಶ್ ಸೈನಿ ಜೊತೆ ಸೇರಿ ಮಾಧ್ಯಮ ಸಂಸ್ಥೆಯು ಪಿತೂರಿ ನಡೆಸಿದೆ. ಇವರೆಲ್ಲರೂ ಟ್ವಿಟರ್ನಲ್ಲಿ ಈ ತಿರುಚಿದ್ದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದೂ ದೂರಿನಲ್ಲಿ ಹೇಳಲಾಗಿದೆ.</p>.<p>‘ರಾಹುಲ್ ಗಾಂಧಿ ಅವರು ವಯನಾಡಿನ ಯುವಕರನ್ನು ಉದ್ದೇಶಿಸಿ ಮಾಡತನಾಡಿದ್ದರು ಎಂಬುದು ಟಿ.ವಿ ವಾಹಿನಿಯ ನಿರೂಪಕರಿಗೆ ತಿಳಿದಿತ್ತು ಎಂದೂ ದೂರಿದ್ದಾರೆ.</p>.<p>ಕೇರಳದಲ್ಲಿ ತಮ್ಮ ಸಂಸದರ ಕಚೇರಿ ಗುರಿಯಾಗಿಸಿ ಗಲಾಟೆ ಮಾಡಿದ್ದ ಎಸ್ಎಫ್ಐ ಕಾರ್ಯಕರ್ತರನ್ನು ಕ್ಷಮಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಯನ್ನು ತಿರುಚಿ ಉದಯಪುರದಲ್ಲಿ ನಡೆದ ಟೇಲರ್ ಹತ್ಯೆ ಪ್ರಕರಣಕ್ಕೆ ಅನ್ವಯಿಸಿ ಹೇಳಿದಂತೆ ವಿಡಿಯೊವನ್ನು ರೂಪಿಸಿದ್ದು, ಬಿಜೆಪಿಯ ಹಲವು ಮುಖಂಡರು ಇದನ್ನು ಹಂಚಿಕೊಂಡಿದ್ದರು.</p>.<p>ತಿರುಚಿದ್ದ ವಿಡಿಯೊ ಪ್ರಸಾರ ಮಾಡಿದ್ದಕ್ಕಾಗಿ ಟಿ.ವಿ ವಾಹಿನಿಯು ಕ್ಷಮೆ ಕೋರಿತ್ತು.</p>.<p><strong>ಓದಿ...</strong></p>.<p><a href="https://www.prajavani.net/district/udupi/maruti-swift-car-accident-near-maravanthe-beach-kundapura-udupi-district-950938.html" target="_blank">ಮರವಂತೆ ಬೀಚ್ ಬಳಿ ಅರಬ್ಬಿ ಸಮುದ್ರಕ್ಕೆ ಉರುಳಿದಕಾರು: ಚಾಲಕಸಾವು, ಇಬ್ಬರಿಗೆ ಗಾಯ</a></p>.<p><a href="https://www.prajavani.net/district/koppal/medical-college-student-died-after-being-hit-by-a-train-in-koppal-950955.html" target="_blank">ಕೊಪ್ಪಳ: ರೈಲಿಗೆ ಸಿಲುಕಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಸಾವು</a></p>.<p><a href="https://www.prajavani.net/district/koppal/government-school-teacher-arrested-for-sexually-harrassing-womens-950949.html" target="_blank">ಕೊಪ್ಪಳ: ಮಹಿಳೆಯರ ಜೊತೆ ಅಸಭ್ಯ ವರ್ತನೆ, ತಲೆ ಮರೆಸಿಕೊಂಡಿದ್ದ ಶಿಕ್ಷಕನ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>