ಚಕ್ರವರ್ತಿ ಮತ್ತು ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ, ಚಕ್ರವರ್ತಿ ಅವರ ಪರ ಹಾಜರಿದ್ದ ವಕೀಲರು, ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕೆಂದು ನ್ಯಾಯಪೀಠವನ್ನು ಕೋರಿದರು. ಬಳಿಕ ನ್ಯಾಯಾಲಯವು ಅನುಮತಿ ನೀಡಿತು.