<p class="title"><strong>ನವದೆಹಲಿ</strong>: ವಾಯುಮಾಲಿನ್ಯವನ್ನು ನಿಯಂತ್ರಿಸಲು ರೂಪಿಸಿರುವ ಕ್ರಿಯಾಯೋಜನೆಯ ವಿವರಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚಿಸಿದೆ.</p>.<p class="title">ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮವು (ಎನ್ಸಿಎಪಿ) ಎಲ್ಲ ನಗರಗಳಿಗೂ ಅನ್ವಯವಾಗಲಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ವಾಯುಮಾಲಿನ್ಯ ಪ್ರಮಾಣ ಏರಿಕೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಸೂಚಿಸಿತು.</p>.<p class="title">ವಾಯು ಗುಣಮಟ್ಟವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರವು 2018ರಲ್ಲಿ ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮ (ಎನ್ಸಿಎಪಿ) ಅನ್ನು ಪ್ರಕಟಿಸಿತ್ತು. ಅದರ ಪ್ರಕಾರ, ಮಾಲಿನ್ಯ ಪ್ರಮಾಣ ಹೆಚ್ಚಿದೆ ಎಂದು ಗುರುತಿಸಲಾದ 132 ನಗರಗಳಲ್ಲಿ ಮಾಲಿನ್ಯ ನಿಯಂತ್ರಿಸಲು ಮಂಡಳಿಗಳು ಅಗತ್ಯ ಕ್ರಮವನ್ನು ವಹಿಸಬೇಕಾಗಿದೆ.</p>.<p class="title">ಇದಕ್ಕೂ ಮೊದಲು ಕೋವಿಡ್ ಕಾರಣ ನೀಡಿದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಕ್ರಿಯಾ ಯೋಜನೆಗಾಗಿ ಮಾರ್ಗಸೂಚಿ ರೂಪಿಸಲು ಎರಡು ತಿಂಗಳ ಕಾಲಾವಕಾಶವನ್ನು ಕೋರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ವಾಯುಮಾಲಿನ್ಯವನ್ನು ನಿಯಂತ್ರಿಸಲು ರೂಪಿಸಿರುವ ಕ್ರಿಯಾಯೋಜನೆಯ ವಿವರಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚಿಸಿದೆ.</p>.<p class="title">ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮವು (ಎನ್ಸಿಎಪಿ) ಎಲ್ಲ ನಗರಗಳಿಗೂ ಅನ್ವಯವಾಗಲಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ವಾಯುಮಾಲಿನ್ಯ ಪ್ರಮಾಣ ಏರಿಕೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಸೂಚಿಸಿತು.</p>.<p class="title">ವಾಯು ಗುಣಮಟ್ಟವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರವು 2018ರಲ್ಲಿ ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮ (ಎನ್ಸಿಎಪಿ) ಅನ್ನು ಪ್ರಕಟಿಸಿತ್ತು. ಅದರ ಪ್ರಕಾರ, ಮಾಲಿನ್ಯ ಪ್ರಮಾಣ ಹೆಚ್ಚಿದೆ ಎಂದು ಗುರುತಿಸಲಾದ 132 ನಗರಗಳಲ್ಲಿ ಮಾಲಿನ್ಯ ನಿಯಂತ್ರಿಸಲು ಮಂಡಳಿಗಳು ಅಗತ್ಯ ಕ್ರಮವನ್ನು ವಹಿಸಬೇಕಾಗಿದೆ.</p>.<p class="title">ಇದಕ್ಕೂ ಮೊದಲು ಕೋವಿಡ್ ಕಾರಣ ನೀಡಿದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಕ್ರಿಯಾ ಯೋಜನೆಗಾಗಿ ಮಾರ್ಗಸೂಚಿ ರೂಪಿಸಲು ಎರಡು ತಿಂಗಳ ಕಾಲಾವಕಾಶವನ್ನು ಕೋರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>