<p><strong>ನವದೆಹಲಿ</strong>: ಹಲವಾರು ರಾಜ್ಯಗಳ ನದಿಗಳಲ್ಲಿ ಹೆಣಗಳು ತೇಲಿ ಬರುತ್ತಿರುವ ವರದಿಗಳಿವೆ. ಇಂಥ ವಾರಸುದಾರರು ಇಲ್ಲದ ಹೆಣಗಳ ಅಂತ್ಯಸಂಸ್ಕಾರವನ್ನು ಅನಿಲ ಆಧಾರಿತ ಚಿತಾಗಾರಗಳಲ್ಲಿ ನೆರವೇರಿಸುವ ಸಂಬಂಧ ನೀತಿಯೊಂದನ್ನು ರೂಪಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸಲಹೆ ನೀಡಿದೆ.</p>.<p>ಈ ಸಂಬಂಧ ಕೇಂದ್ರ ಸರ್ಕಾರ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಸರ್ಕಾರಗಳಿಗೆ ಎನ್ಜಿಟಿ ನೋಟಿಸ್ ನೀಡಿದೆ.</p>.<p>ಚಂಡೀಗಡ ಮೂಲದ ವಕೀಲ ಎಚ್.ಸಿ.ಅರೋರಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎನ್ಜಿಟಿಯ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ.ಗೋಯೆಲ್ ನೇತೃತ್ವದ ಪ್ರಧಾನಪೀಠ, ಈ ಆದೇಶ ನೀಡಿತು.</p>.<p>ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದಲ್ಲಿ ನದಿಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಹೆಣಗಳು ತೇಲಿ ಬಂದ ಬಗ್ಗೆ ವರದಿಗಳಿವೆ. ವ್ಯಕ್ತಿಗಳು ಕೋವಿಡ್ನಿಂದ ಮೃತಪಟ್ಟಿರಬಹುದು ಎಂಬ ಅಂಜಿಕೆಯಿಂದ ಮೃತರ ಸಂಬಂಧಿಗಳೇ ಅವರ ಹೆಣಗಳನ್ನು ನದಿಗಳಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಲವಾರು ರಾಜ್ಯಗಳ ನದಿಗಳಲ್ಲಿ ಹೆಣಗಳು ತೇಲಿ ಬರುತ್ತಿರುವ ವರದಿಗಳಿವೆ. ಇಂಥ ವಾರಸುದಾರರು ಇಲ್ಲದ ಹೆಣಗಳ ಅಂತ್ಯಸಂಸ್ಕಾರವನ್ನು ಅನಿಲ ಆಧಾರಿತ ಚಿತಾಗಾರಗಳಲ್ಲಿ ನೆರವೇರಿಸುವ ಸಂಬಂಧ ನೀತಿಯೊಂದನ್ನು ರೂಪಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸಲಹೆ ನೀಡಿದೆ.</p>.<p>ಈ ಸಂಬಂಧ ಕೇಂದ್ರ ಸರ್ಕಾರ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಸರ್ಕಾರಗಳಿಗೆ ಎನ್ಜಿಟಿ ನೋಟಿಸ್ ನೀಡಿದೆ.</p>.<p>ಚಂಡೀಗಡ ಮೂಲದ ವಕೀಲ ಎಚ್.ಸಿ.ಅರೋರಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎನ್ಜಿಟಿಯ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ.ಗೋಯೆಲ್ ನೇತೃತ್ವದ ಪ್ರಧಾನಪೀಠ, ಈ ಆದೇಶ ನೀಡಿತು.</p>.<p>ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದಲ್ಲಿ ನದಿಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಹೆಣಗಳು ತೇಲಿ ಬಂದ ಬಗ್ಗೆ ವರದಿಗಳಿವೆ. ವ್ಯಕ್ತಿಗಳು ಕೋವಿಡ್ನಿಂದ ಮೃತಪಟ್ಟಿರಬಹುದು ಎಂಬ ಅಂಜಿಕೆಯಿಂದ ಮೃತರ ಸಂಬಂಧಿಗಳೇ ಅವರ ಹೆಣಗಳನ್ನು ನದಿಗಳಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>