<p><strong>ನವದೆಹಲಿ: </strong>ಜೈವಿಕ–ವೈದ್ಯಕೀಯ ತ್ಯಾಜ್ಯವನ್ನು ನಿರ್ವಹಣೆ ಮಾಡುವ ಘಟಕಗಳು ಕಡ್ಡಾಯವಾಗಿ ಆಯಾ ರಾಜ್ಯಗಳಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿಗಳಿಂದ ದೃಢೀಕರಣ ಪಡೆಯಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿರ್ದೇಶನ ನೀಡಿದೆ.</p>.<p>ಜೈವಿಕ–ವೈದ್ಯಕೀಯ ತ್ಯಾಜ್ಯದ ವಿಲೇವಾರಿಯನ್ನು ಸಂಬಂಧಪಟ್ಟ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆಯೇ ಎಂಬುದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪರಿಶೀಲಿಸಬೇಕು ಎಂದೂ ಸೂಚಿಸಿದೆ.</p>.<p>ಎನ್ಜಿಟಿಯ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ಅವರ ನೇತೃತ್ವದ ಪ್ರಧಾನ ಪೀಠ ಈ ನಿರ್ದೇಶನ ನೀಡಿದೆ.</p>.<p>ನಿಯಮಗಳ ಅನುಸಾರವಾಗಿ ಜೈವಿಕ–ವೈದ್ಯಕೀಯ ತ್ಯಾಜ್ಯದ ವಿಲೇವಾರಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಉತ್ತರ ಪ್ರದೇಶ ಮೂಲದ ಪತ್ರಕರ್ತ ಶೈಲೇಶ್ಸಿಂಗ್ ಅರ್ಜಿ ಸಲ್ಲಿಸಿದ್ದರು.</p>.<p>‘ತ್ಯಾಜ್ಯ ವಿಲೇವಾರಿ ಘಟಕಗಳಿಂದ ನಿಯಮಗಳ ಪಾಲನೆಯಾಗುತ್ತದೆಯೇ ಇಲ್ಲವೇ ಎಂಬುದನ್ನು ಸಿಪಿಸಿಬಿ ಕಾಲಕಾಲಕ್ಕೆ ಪರಿಶೀಲಿಸಬೇಕು. ಕನಿಷ್ಠ ತ್ರೈಮಾಸಿಕವಾಗಿಯಾದರೂ ಪರಿಶೀಲಿಸಿ, ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಮೂರ್ತಿ ಗೋಯೆಲ್ ಸೂಚಿಸಿದರು.</p>.<p>‘ಪ್ರತಿಯೊಂದು ಆರೋಗ್ಯ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢೀಕರಣ ಪಡೆದಿರುವ ಬಗ್ಗೆ ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಖಾತರಿಪಡಿಸಿಕೊಳ್ಳಬೇಕು. ಅವುಗಳು ನಿಯಮ ಪಾಲನೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಜೈವಿಕ–ವೈದ್ಯಕೀಯ ತ್ಯಾಜ್ಯ ಬಹಳ ಅಪಾಯಕಾರಿ. ಯಾವುದೇ ಸಂದರ್ಭದಲ್ಲಿಯೂ ಅದು ಸಾಮಾನ್ಯ ತ್ಯಾಜ್ಯದೊಂದಿಗೆ ಸೇರದಂತೆ ನೋಡಿಕೊಳ್ಳುವುದು ಅತ್ಯಗತ್ಯ’ ಎಂದೂ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>‘ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕಾಗಿ 130 ಆರೋಗ್ಯ ಕೇಂದ್ರಗಳಿಗೆ ₹ 7.17 ಕೋಟಿ, 6 ಸಾಮಾನ್ಯ ಜೈವಿಕ–ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ₹ 85 ಲಕ್ಷ ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ತಕ್ಷಣವೇ ವಸೂಲು ಮಾಡುವಂತೆ’ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜೈವಿಕ–ವೈದ್ಯಕೀಯ ತ್ಯಾಜ್ಯವನ್ನು ನಿರ್ವಹಣೆ ಮಾಡುವ ಘಟಕಗಳು ಕಡ್ಡಾಯವಾಗಿ ಆಯಾ ರಾಜ್ಯಗಳಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿಗಳಿಂದ ದೃಢೀಕರಣ ಪಡೆಯಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿರ್ದೇಶನ ನೀಡಿದೆ.</p>.<p>ಜೈವಿಕ–ವೈದ್ಯಕೀಯ ತ್ಯಾಜ್ಯದ ವಿಲೇವಾರಿಯನ್ನು ಸಂಬಂಧಪಟ್ಟ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆಯೇ ಎಂಬುದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪರಿಶೀಲಿಸಬೇಕು ಎಂದೂ ಸೂಚಿಸಿದೆ.</p>.<p>ಎನ್ಜಿಟಿಯ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ಅವರ ನೇತೃತ್ವದ ಪ್ರಧಾನ ಪೀಠ ಈ ನಿರ್ದೇಶನ ನೀಡಿದೆ.</p>.<p>ನಿಯಮಗಳ ಅನುಸಾರವಾಗಿ ಜೈವಿಕ–ವೈದ್ಯಕೀಯ ತ್ಯಾಜ್ಯದ ವಿಲೇವಾರಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಉತ್ತರ ಪ್ರದೇಶ ಮೂಲದ ಪತ್ರಕರ್ತ ಶೈಲೇಶ್ಸಿಂಗ್ ಅರ್ಜಿ ಸಲ್ಲಿಸಿದ್ದರು.</p>.<p>‘ತ್ಯಾಜ್ಯ ವಿಲೇವಾರಿ ಘಟಕಗಳಿಂದ ನಿಯಮಗಳ ಪಾಲನೆಯಾಗುತ್ತದೆಯೇ ಇಲ್ಲವೇ ಎಂಬುದನ್ನು ಸಿಪಿಸಿಬಿ ಕಾಲಕಾಲಕ್ಕೆ ಪರಿಶೀಲಿಸಬೇಕು. ಕನಿಷ್ಠ ತ್ರೈಮಾಸಿಕವಾಗಿಯಾದರೂ ಪರಿಶೀಲಿಸಿ, ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಮೂರ್ತಿ ಗೋಯೆಲ್ ಸೂಚಿಸಿದರು.</p>.<p>‘ಪ್ರತಿಯೊಂದು ಆರೋಗ್ಯ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢೀಕರಣ ಪಡೆದಿರುವ ಬಗ್ಗೆ ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಖಾತರಿಪಡಿಸಿಕೊಳ್ಳಬೇಕು. ಅವುಗಳು ನಿಯಮ ಪಾಲನೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಜೈವಿಕ–ವೈದ್ಯಕೀಯ ತ್ಯಾಜ್ಯ ಬಹಳ ಅಪಾಯಕಾರಿ. ಯಾವುದೇ ಸಂದರ್ಭದಲ್ಲಿಯೂ ಅದು ಸಾಮಾನ್ಯ ತ್ಯಾಜ್ಯದೊಂದಿಗೆ ಸೇರದಂತೆ ನೋಡಿಕೊಳ್ಳುವುದು ಅತ್ಯಗತ್ಯ’ ಎಂದೂ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>‘ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕಾಗಿ 130 ಆರೋಗ್ಯ ಕೇಂದ್ರಗಳಿಗೆ ₹ 7.17 ಕೋಟಿ, 6 ಸಾಮಾನ್ಯ ಜೈವಿಕ–ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ₹ 85 ಲಕ್ಷ ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ತಕ್ಷಣವೇ ವಸೂಲು ಮಾಡುವಂತೆ’ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>