<p><strong>ನವದೆಹಲಿ</strong>: ಕಳೆದ ವರ್ಷ ಡಿಸೆಂಬರ್ನಲ್ಲಿ ಗುವಾಹಟಿಯ ಬಳಿ ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಡಿಕ್ಕಿಯಾಗಿ ಏಳು ಆನೆಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.</p>.<p>ಘಟನೆ ಬಗ್ಗೆ ಮಾಡಲಾದ ಪತ್ರಿಕಾ ವರದಿಯ ಪ್ರಕಾರ ನ್ಯಾಯಮಂಡಳಿಯು ಸ್ವಯಂ ಪ್ರೇರಿತವಾಗಿ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿದೆ.</p>.<p>ನ್ಯಾಯಮಂಡಳಿಯು ಜನವರಿ 5ರಂದು ಹೊರಡಿಸಲಾದ ತನ್ನ ಆದೇಶದಲ್ಲಿ, ‘ಮೇಲ್ನೋಟಕ್ಕೆ ಸುದ್ದಿಯಲ್ಲಿ ಉಲ್ಲೇಖಿಸಲಾದ ಸಂಗತಿಗಳು ಮತ್ತು ಸಂದರ್ಭಗಳು ಪರಿಸರಕ್ಕೆ ಸಂಬಂಧಿಸಿದ ಗಣನೀಯ ಪ್ರಶ್ನೆಗಳನ್ನು ಹುಟ್ಟುಹಾಕಿವೆ...’ ಎಂದು ಹೇಳಿದೆ.</p>.<p>ಜಮುನಾಮುಖ್–ಕಾಮಪುರ ವಿಭಾಗದಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸೈರಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿವೆ ಎಂದು ವರದಿಯು ಹೇಳಿದೆ.</p>.<p>ನ್ಯಾಯಮಂಡಳಿಯು ಸಿಪಿಸಿಬಿ, ಅಸ್ಸಾಂ ಸರ್ಕಾರದ ಪರಿಸರ ವಿಶೇಷ ಮುಖ್ಯ ಕಾರ್ಯದರ್ಶಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅಸ್ಸಾಂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಸೇರಿಸಿಕೊಂಡು, ನೋಟಿಸ್ ಜಾರಿ ಮಾಡಿದೆ.</p>.<p>ಜನವರಿ 28ರಂದು ಕೋಲ್ಕತ್ತದಲ್ಲಿರುವ ನ್ಯಾಯಮಂಡಳಿಯ ಪೂರ್ವ ವಲಯ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡುವಂತೆ ಅದು ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ವರ್ಷ ಡಿಸೆಂಬರ್ನಲ್ಲಿ ಗುವಾಹಟಿಯ ಬಳಿ ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಡಿಕ್ಕಿಯಾಗಿ ಏಳು ಆನೆಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.</p>.<p>ಘಟನೆ ಬಗ್ಗೆ ಮಾಡಲಾದ ಪತ್ರಿಕಾ ವರದಿಯ ಪ್ರಕಾರ ನ್ಯಾಯಮಂಡಳಿಯು ಸ್ವಯಂ ಪ್ರೇರಿತವಾಗಿ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿದೆ.</p>.<p>ನ್ಯಾಯಮಂಡಳಿಯು ಜನವರಿ 5ರಂದು ಹೊರಡಿಸಲಾದ ತನ್ನ ಆದೇಶದಲ್ಲಿ, ‘ಮೇಲ್ನೋಟಕ್ಕೆ ಸುದ್ದಿಯಲ್ಲಿ ಉಲ್ಲೇಖಿಸಲಾದ ಸಂಗತಿಗಳು ಮತ್ತು ಸಂದರ್ಭಗಳು ಪರಿಸರಕ್ಕೆ ಸಂಬಂಧಿಸಿದ ಗಣನೀಯ ಪ್ರಶ್ನೆಗಳನ್ನು ಹುಟ್ಟುಹಾಕಿವೆ...’ ಎಂದು ಹೇಳಿದೆ.</p>.<p>ಜಮುನಾಮುಖ್–ಕಾಮಪುರ ವಿಭಾಗದಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸೈರಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿವೆ ಎಂದು ವರದಿಯು ಹೇಳಿದೆ.</p>.<p>ನ್ಯಾಯಮಂಡಳಿಯು ಸಿಪಿಸಿಬಿ, ಅಸ್ಸಾಂ ಸರ್ಕಾರದ ಪರಿಸರ ವಿಶೇಷ ಮುಖ್ಯ ಕಾರ್ಯದರ್ಶಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅಸ್ಸಾಂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಸೇರಿಸಿಕೊಂಡು, ನೋಟಿಸ್ ಜಾರಿ ಮಾಡಿದೆ.</p>.<p>ಜನವರಿ 28ರಂದು ಕೋಲ್ಕತ್ತದಲ್ಲಿರುವ ನ್ಯಾಯಮಂಡಳಿಯ ಪೂರ್ವ ವಲಯ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡುವಂತೆ ಅದು ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>