<p class="title"><strong>ನವದೆಹಲಿ</strong>: ಸ್ವಯಂಪ್ರೇರಿತವಾಗಿ ದಾಖಲಿಸಿದ ಪ್ರಕರಣಗಳಲ್ಲಿ ಆದೇಶ ನೀಡುವ ಮೊದಲು ಉಭಯತ್ರರ ವಾದ ಆಲಿಸುವ ಅಧಿಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗಿದೆ (ಎನ್ಜಿಟಿ) ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠವು ಗುರುವಾರ ಪ್ರಕರಣವೊಂದರ ಸಂಬಂಧ ಅ. 7ರಂದು ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಈ ಸ್ಪಷ್ಟನೆಯನ್ನು ನೀಡಿತು.</p>.<p class="title">ಪರಿಸರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ವಿಚಾರಣೆ ನಡೆಸುವ ಅಧಿಕಾರವಿದೆ. ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಕಣ್ಗಾವಲು ಸಂಸ್ಥೆಯಾಗಿ ಕೆಲಸ ಮಾಡಬೇಕಾಗಿರುವ ಎನ್ಜಿಟಿಯು ದೂರುಗಳಿಗೆ ಕಾಯುತ್ತಾ ಕೂರಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿತು.</p>.<p class="title">ಎನ್ಜಿಟಿಯು ಸ್ವಾಯತ್ತ ಸಂಸ್ಥೆಯಾಗಿದೆ. ಕೋರ್ಟ್ಗಳಂತೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗದು ಎಂಬ ವಾದವನ್ನು ತಳ್ಳಿಹಾಕಿತು. ದೂರು ಬರುವವರೆಗೂ ಮೌನಪ್ರೇಕ್ಷಕನಾಗಿ ಕೂರಲಾಗದು ಎಂದೂ ಹೇಳಿತು.</p>.<p class="title">ಅ. 25ರಂದು ದ್ವಿಸದಸ್ಯರ ಪೀಠವು ಗ್ರೇಟರ್ ಮುಂಬೈನಗರಪಾಲಿಕೆಯ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಎನ್ಜಿಟಿಗೆ ವರ್ಗಾಯಿಸಿತ್ತು. ಇವುಗಳನ್ನು ಹೊಸ ಅರ್ಜಿಗಳು ಎಂದು ಪರಿಗಣಿಸುವಂತೆಯೂ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಸ್ವಯಂಪ್ರೇರಿತವಾಗಿ ದಾಖಲಿಸಿದ ಪ್ರಕರಣಗಳಲ್ಲಿ ಆದೇಶ ನೀಡುವ ಮೊದಲು ಉಭಯತ್ರರ ವಾದ ಆಲಿಸುವ ಅಧಿಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗಿದೆ (ಎನ್ಜಿಟಿ) ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠವು ಗುರುವಾರ ಪ್ರಕರಣವೊಂದರ ಸಂಬಂಧ ಅ. 7ರಂದು ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಈ ಸ್ಪಷ್ಟನೆಯನ್ನು ನೀಡಿತು.</p>.<p class="title">ಪರಿಸರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ವಿಚಾರಣೆ ನಡೆಸುವ ಅಧಿಕಾರವಿದೆ. ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಕಣ್ಗಾವಲು ಸಂಸ್ಥೆಯಾಗಿ ಕೆಲಸ ಮಾಡಬೇಕಾಗಿರುವ ಎನ್ಜಿಟಿಯು ದೂರುಗಳಿಗೆ ಕಾಯುತ್ತಾ ಕೂರಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿತು.</p>.<p class="title">ಎನ್ಜಿಟಿಯು ಸ್ವಾಯತ್ತ ಸಂಸ್ಥೆಯಾಗಿದೆ. ಕೋರ್ಟ್ಗಳಂತೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗದು ಎಂಬ ವಾದವನ್ನು ತಳ್ಳಿಹಾಕಿತು. ದೂರು ಬರುವವರೆಗೂ ಮೌನಪ್ರೇಕ್ಷಕನಾಗಿ ಕೂರಲಾಗದು ಎಂದೂ ಹೇಳಿತು.</p>.<p class="title">ಅ. 25ರಂದು ದ್ವಿಸದಸ್ಯರ ಪೀಠವು ಗ್ರೇಟರ್ ಮುಂಬೈನಗರಪಾಲಿಕೆಯ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ಎನ್ಜಿಟಿಗೆ ವರ್ಗಾಯಿಸಿತ್ತು. ಇವುಗಳನ್ನು ಹೊಸ ಅರ್ಜಿಗಳು ಎಂದು ಪರಿಗಣಿಸುವಂತೆಯೂ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>