<p><strong>ನವದೆಹಲಿ</strong>: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ದನಗಳಿಂದ ಆಗುತ್ತಿರುವ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಹೆದ್ದಾರಿ ಬದಿಯಲ್ಲಿ ಪ್ರಾಯೋಗಿಕವಾಗಿ ಗೋಶಾಲೆ ತೆರೆಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮುಂದಾಗಿದೆ. </p>.<p>ಬಿಡಾಡಿ ದನಗಳ ಹಾವಳಿಯಿಂದ ಪ್ರಯಾಣಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ದನಗಳು ಹಾಗೂ ಇತರೆ ಪ್ರಾಣಿಗಳಿಂದ ವಾಹನಗಳ ಸಂಚಾರಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರವು ಮಂಗಳವಾರ ತಿಳಿಸಿದೆ.</p>.<p>0.21ರಿಂದ 2.29 ಹೆಕ್ಟೇರ್ ಪ್ರದೇಶದಲ್ಲಿ ಗೋಶಾಲೆ ನಿರ್ಮಿಸಲಾಗುವುದು ಎಂದು ಹೇಳಿದೆ.</p>.<p>ದೇಶದ ಎಲ್ಲಾ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತದೆ. ಆರಂಭದಲ್ಲಿ ಉತ್ತರಪ್ರದೇಶ/ ಹರಿಯಾಣದ ಗಡಿ ಭಾಗದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 334ಬಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತಿದೆ. ಈ ಕುರಿತು ಗವಾರ್ ಕನ್ಸ್ಟ್ರಕ್ಷನ್ ಕಂಪನಿ ಜೊತೆಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದೆ.</p>.<p>ಈ ಗೋಶಾಲೆಗಳಲ್ಲಿ ತುರ್ತು ಚಿಕಿತ್ಸೆ, ಮೇವು, ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಅವುಗಳ ಆರೋಗ್ಯದ ಮೇಲೆ ನಿಗಾ ಇಡಲು ಸಿಬ್ಬಂದಿಯನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದೆ.</p>.<p>ಅಪಘಾತಗಳಿಂದ ಗಾಯಗೊಳ್ಳುವ ಪ್ರಾಣಿಗಳ ಚಿಕಿತ್ಸೆ ಹಾಗೂ ಆರೈಕೆಗಾಗಿ ಪ್ರತಿ 50 ಕಿ.ಮೀ. ಅಂತರದಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಈ ಸೌಲಭ್ಯ ಒದಗಿಸಲಾಗುತ್ತದೆ ಎಂದು ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ದನಗಳಿಂದ ಆಗುತ್ತಿರುವ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಹೆದ್ದಾರಿ ಬದಿಯಲ್ಲಿ ಪ್ರಾಯೋಗಿಕವಾಗಿ ಗೋಶಾಲೆ ತೆರೆಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮುಂದಾಗಿದೆ. </p>.<p>ಬಿಡಾಡಿ ದನಗಳ ಹಾವಳಿಯಿಂದ ಪ್ರಯಾಣಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ದನಗಳು ಹಾಗೂ ಇತರೆ ಪ್ರಾಣಿಗಳಿಂದ ವಾಹನಗಳ ಸಂಚಾರಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರವು ಮಂಗಳವಾರ ತಿಳಿಸಿದೆ.</p>.<p>0.21ರಿಂದ 2.29 ಹೆಕ್ಟೇರ್ ಪ್ರದೇಶದಲ್ಲಿ ಗೋಶಾಲೆ ನಿರ್ಮಿಸಲಾಗುವುದು ಎಂದು ಹೇಳಿದೆ.</p>.<p>ದೇಶದ ಎಲ್ಲಾ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತದೆ. ಆರಂಭದಲ್ಲಿ ಉತ್ತರಪ್ರದೇಶ/ ಹರಿಯಾಣದ ಗಡಿ ಭಾಗದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 334ಬಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತಿದೆ. ಈ ಕುರಿತು ಗವಾರ್ ಕನ್ಸ್ಟ್ರಕ್ಷನ್ ಕಂಪನಿ ಜೊತೆಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದೆ.</p>.<p>ಈ ಗೋಶಾಲೆಗಳಲ್ಲಿ ತುರ್ತು ಚಿಕಿತ್ಸೆ, ಮೇವು, ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಅವುಗಳ ಆರೋಗ್ಯದ ಮೇಲೆ ನಿಗಾ ಇಡಲು ಸಿಬ್ಬಂದಿಯನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದೆ.</p>.<p>ಅಪಘಾತಗಳಿಂದ ಗಾಯಗೊಳ್ಳುವ ಪ್ರಾಣಿಗಳ ಚಿಕಿತ್ಸೆ ಹಾಗೂ ಆರೈಕೆಗಾಗಿ ಪ್ರತಿ 50 ಕಿ.ಮೀ. ಅಂತರದಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಈ ಸೌಲಭ್ಯ ಒದಗಿಸಲಾಗುತ್ತದೆ ಎಂದು ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>