<p><strong>ವಿಶಾಖಪಟ್ಟಣ:</strong>ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (ವೈಝಾಗ್) ಗುರುವಾರ ಬೆಳಗಿನಜಾವ ಸಂಭವಿಸಿದಅನಿಲ ಸೋರಿಕೆ ಕುರಿತಂತೆ ಕೇಂದ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ವರದಿ ಕೇಳಿದೆ.</p>.<p>ಕೊರೊನಾ ವೈರಸ್ ವಿರುದ್ಧದ ಹೋರಾಟದ ಸಂದರ್ಭದಲ್ಲೇ ಅನಿಲ ದುರಂತ ಸಂಭವಿಸಿದ್ದು ಜನರಲ್ಲಿ ಮತ್ತಷ್ಟು ಭಯವನ್ನು ಉಂಟುಮಾಡಿದೆ.</p>.<p>ಈ ಅನಿಲ ದುರಂತದಲ್ಲಿ ಯಾವುದೇ ರೀತಿಯ ಮಾನವಕೃತ ನ್ಯೂನತೆ ಹಾಗೂ ಅಜಾಗರೂಕತೆ ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಎನ್ಎಚ್ಆರ್ಸಿ ತಿಳಿಸಿದೆ. ಆದಾಗ್ಯೂ ನಾಗರಿಕರು ಸಾವನ್ನಪ್ಪಿರುವುದು, ಹಲವರು ಅನಾರೋಗ್ಯಗೊಂಡಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎನ್ಎಚ್ಆರ್ಸಿ ಅಭಿಪ್ರಾಯಪಟ್ಟಿದೆ.</p>.<p>ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯ ಪರಿಣಾಮ ಉಂಟಾಗಿದೆ. ಜನರು ರಸ್ತೆಗಳ ಮೇಲೆ ಬಿದ್ದಿರುವುದು, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವುದು, ದೇಹದ ಮೇಲೆ ಗುಳ್ಳೆಗಳು ಮೂಡಿರುವ ಬಗ್ಗೆ ವರದಿಯಾಗಿದೆ ಎಂದು ಎನ್ಎಚ್ಆರ್ಸಿ ಹೇಳಿದೆ.</p>.<p>ಸದ್ಯ ದೇಶದಲ್ಲಿ ಕೊರೊನಾ ವೈರಸ್ ಹಾವಳಿಯಿಂದ ಅಪಾಯ ಎದುರಾಗಿದ್ದು ಜನರನ್ನು ಬಲವಂತವಾಗಿ ಮನೆಯಲ್ಲಿ ಇರಿಸಲಾಗಿದೆ. ಈ ಸಮಯದಲ್ಲಿ ಅನಿಲ ಸೋರಿಕೆಯ ಘೋರ ದುರಂತ ಜನರನ್ನು ಮತ್ತಷ್ಟು ಭಯಭೀತರನ್ನಾಗಿಸಿದೆ.</p>.<p>ಅನಿಲ ಸೋರಿಕೆ ನಂತರದ ರಕ್ಷಣಾ ಕಾರ್ಯಾಚರಣೆಗಳು, ವೈದ್ಯಕೀಯ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ನೀಡಿರುವ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಆಂಧ್ರಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಎನ್ಎಚ್ಆರ್ಸಿ ಕೋರಿದೆ.</p>.<p>ಅನಿಲ ಸೋರಿಕೆ ಸಂಬಂಧ ನಡೆಯುತ್ತಿರುವ ತನಿಖೆ ಹಾಗೂ ಘಟನೆ ಕುರಿತಂತೆ ನೋಂದಣಿಯಾಗಿರುವ ಎಫ್ಐಆರ್ಗಳ ಬಗ್ಗೆ ವರದಿ ನೀಡುವಂತೆ ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಎನ್ಎಚ್ಆರ್ಸಿ ಸೂಚಿಸಿದೆ.</p>.<p>ಅನಿಲ ಸೋರಿಕೆ ಕಾರ್ಖಾನೆಯಲ್ಲಿ ಕೈಗಾರಿಕೆ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಎನ್ಎಚ್ಆರ್ಸಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.</p>.<p>ಸಂಬಂಧಪಟ್ಟ ಅಧಿಕಾರಿಗಳಿಂದ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣ:</strong>ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (ವೈಝಾಗ್) ಗುರುವಾರ ಬೆಳಗಿನಜಾವ ಸಂಭವಿಸಿದಅನಿಲ ಸೋರಿಕೆ ಕುರಿತಂತೆ ಕೇಂದ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ವರದಿ ಕೇಳಿದೆ.</p>.<p>ಕೊರೊನಾ ವೈರಸ್ ವಿರುದ್ಧದ ಹೋರಾಟದ ಸಂದರ್ಭದಲ್ಲೇ ಅನಿಲ ದುರಂತ ಸಂಭವಿಸಿದ್ದು ಜನರಲ್ಲಿ ಮತ್ತಷ್ಟು ಭಯವನ್ನು ಉಂಟುಮಾಡಿದೆ.</p>.<p>ಈ ಅನಿಲ ದುರಂತದಲ್ಲಿ ಯಾವುದೇ ರೀತಿಯ ಮಾನವಕೃತ ನ್ಯೂನತೆ ಹಾಗೂ ಅಜಾಗರೂಕತೆ ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಎನ್ಎಚ್ಆರ್ಸಿ ತಿಳಿಸಿದೆ. ಆದಾಗ್ಯೂ ನಾಗರಿಕರು ಸಾವನ್ನಪ್ಪಿರುವುದು, ಹಲವರು ಅನಾರೋಗ್ಯಗೊಂಡಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎನ್ಎಚ್ಆರ್ಸಿ ಅಭಿಪ್ರಾಯಪಟ್ಟಿದೆ.</p>.<p>ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯ ಪರಿಣಾಮ ಉಂಟಾಗಿದೆ. ಜನರು ರಸ್ತೆಗಳ ಮೇಲೆ ಬಿದ್ದಿರುವುದು, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವುದು, ದೇಹದ ಮೇಲೆ ಗುಳ್ಳೆಗಳು ಮೂಡಿರುವ ಬಗ್ಗೆ ವರದಿಯಾಗಿದೆ ಎಂದು ಎನ್ಎಚ್ಆರ್ಸಿ ಹೇಳಿದೆ.</p>.<p>ಸದ್ಯ ದೇಶದಲ್ಲಿ ಕೊರೊನಾ ವೈರಸ್ ಹಾವಳಿಯಿಂದ ಅಪಾಯ ಎದುರಾಗಿದ್ದು ಜನರನ್ನು ಬಲವಂತವಾಗಿ ಮನೆಯಲ್ಲಿ ಇರಿಸಲಾಗಿದೆ. ಈ ಸಮಯದಲ್ಲಿ ಅನಿಲ ಸೋರಿಕೆಯ ಘೋರ ದುರಂತ ಜನರನ್ನು ಮತ್ತಷ್ಟು ಭಯಭೀತರನ್ನಾಗಿಸಿದೆ.</p>.<p>ಅನಿಲ ಸೋರಿಕೆ ನಂತರದ ರಕ್ಷಣಾ ಕಾರ್ಯಾಚರಣೆಗಳು, ವೈದ್ಯಕೀಯ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ನೀಡಿರುವ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಆಂಧ್ರಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಎನ್ಎಚ್ಆರ್ಸಿ ಕೋರಿದೆ.</p>.<p>ಅನಿಲ ಸೋರಿಕೆ ಸಂಬಂಧ ನಡೆಯುತ್ತಿರುವ ತನಿಖೆ ಹಾಗೂ ಘಟನೆ ಕುರಿತಂತೆ ನೋಂದಣಿಯಾಗಿರುವ ಎಫ್ಐಆರ್ಗಳ ಬಗ್ಗೆ ವರದಿ ನೀಡುವಂತೆ ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಎನ್ಎಚ್ಆರ್ಸಿ ಸೂಚಿಸಿದೆ.</p>.<p>ಅನಿಲ ಸೋರಿಕೆ ಕಾರ್ಖಾನೆಯಲ್ಲಿ ಕೈಗಾರಿಕೆ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಎನ್ಎಚ್ಆರ್ಸಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.</p>.<p>ಸಂಬಂಧಪಟ್ಟ ಅಧಿಕಾರಿಗಳಿಂದ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>