<p><strong>ಕೋಲ್ಕತ್ತಾ:</strong> ಭೂಕಬಳಿಕೆ ಆರೋಪದ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಶನಿವಾರ ಸತತ 2ನೇ ದಿನ ಸಂದೇಶ್ಖಾಲಿಗೆ ಭೇಟಿ ನೀಡಿದೆ.</p><p>ಜೊತೆಗೆ ಮೀನಾಕ್ಷಿ ಮುಖೋಪಾಧ್ಯಾಯ ನೇತೃತ್ವದ ಸಿಪಿಐ(ಎಂ) ನಿಯೋಗವೂ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದೆ.</p><p>ಮೀನಾಕ್ಷಿ ಅವರು ಪಕ್ಷದ ಮುಖಂಡ ಪಾಲಾಶ್ ದಾಸ್ ಅವರೊಂದಿಗೆ ವಿವಿಧ ಮನೆಗಳಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಎಡಿಜಿ (ದಕ್ಷಿಣ ಬಂಗಾಳ) ಸುಪ್ರತಿಮ್ ಸರ್ಕಾರ್ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.</p>. <p>ಏತನ್ಮಧ್ಯೆ, ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸಂದೇಶ್ಖಾಲಿಯಲ್ಲಿನ ಪರಿಸ್ಥಿತಿಯನ್ನು ನಂದಿಗ್ರಾಮಕ್ಕೆ ಹೋಲಿಸಿದ್ದಾರೆ.</p> <p>ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2007-08ರಲ್ಲಿ ಆಗಿನ ಸರ್ಕಾರದ ಬಲವಂತದ ಭೂಸ್ವಾಧೀನದ ವಿರುದ್ಧ ಸಾವಿರಾರು ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟಿಸಿದ್ದರು. </p><p>ಸದ್ಯ ಸಂದೇಶ್ಖಾಲಿಯಲ್ಲಿ ಪರಿಸ್ಥಿತಿ ನಂದಿಗ್ರಾಮದಂತಿದೆ. ಜನರು ಭೂಕಬಳಿಕೆ, ಮತ ಲೂಟಿ, ಲೈಂಗಿಕ ಕಿರುಕುಳ ಹಾಗೂ ಪ್ರಜಾಪ್ರಭುತ್ವದ ಹತ್ಯೆಯಂತಹ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. </p> <p>ಸಂದೇಶ್ಖಾಲಿಯ ಕೆಲವು ಭಾಗಗಳಲ್ಲಿ ನಿಷೇಧಾಜ್ಞೆ ಇನ್ನೂ ಜಾರಿಯಲ್ಲಿದೆ. ಶೇಖ್ ಶಾಜಹಾನ್ ಮತ್ತು ಅವರ ಸಹೋದರ ಸಿರಾಜುದ್ದೀನ್ ಶೇಖ್ ಸೇರಿದಂತೆ ಸ್ಥಳೀಯ ಟಿಎಂಸಿ ನಾಯಕರು ಭೂಕಬಳಿಕೆ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನೆಗಳು ನಡೆದಿವೆ.</p> <p>ಘಟನೆ ಬಳಿಕ ಈ ಪ್ರದೇಶಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಎಸ್ಟಿಎಸ್ಸಿ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿದ್ದಾರೆ. ಪೊಲೀಸ್ ಮಹಾನಿರ್ದೇಶಕರು ಕೂಡ ಎರಡು ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿ ಗ್ರಾಮಸ್ಥರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದ್ದಾರೆ.</p>.ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ಭೇಟಿ ನೀಡಿದ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ:</strong> ಭೂಕಬಳಿಕೆ ಆರೋಪದ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಶನಿವಾರ ಸತತ 2ನೇ ದಿನ ಸಂದೇಶ್ಖಾಲಿಗೆ ಭೇಟಿ ನೀಡಿದೆ.</p><p>ಜೊತೆಗೆ ಮೀನಾಕ್ಷಿ ಮುಖೋಪಾಧ್ಯಾಯ ನೇತೃತ್ವದ ಸಿಪಿಐ(ಎಂ) ನಿಯೋಗವೂ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದೆ.</p><p>ಮೀನಾಕ್ಷಿ ಅವರು ಪಕ್ಷದ ಮುಖಂಡ ಪಾಲಾಶ್ ದಾಸ್ ಅವರೊಂದಿಗೆ ವಿವಿಧ ಮನೆಗಳಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಎಡಿಜಿ (ದಕ್ಷಿಣ ಬಂಗಾಳ) ಸುಪ್ರತಿಮ್ ಸರ್ಕಾರ್ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.</p>. <p>ಏತನ್ಮಧ್ಯೆ, ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸಂದೇಶ್ಖಾಲಿಯಲ್ಲಿನ ಪರಿಸ್ಥಿತಿಯನ್ನು ನಂದಿಗ್ರಾಮಕ್ಕೆ ಹೋಲಿಸಿದ್ದಾರೆ.</p> <p>ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2007-08ರಲ್ಲಿ ಆಗಿನ ಸರ್ಕಾರದ ಬಲವಂತದ ಭೂಸ್ವಾಧೀನದ ವಿರುದ್ಧ ಸಾವಿರಾರು ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟಿಸಿದ್ದರು. </p><p>ಸದ್ಯ ಸಂದೇಶ್ಖಾಲಿಯಲ್ಲಿ ಪರಿಸ್ಥಿತಿ ನಂದಿಗ್ರಾಮದಂತಿದೆ. ಜನರು ಭೂಕಬಳಿಕೆ, ಮತ ಲೂಟಿ, ಲೈಂಗಿಕ ಕಿರುಕುಳ ಹಾಗೂ ಪ್ರಜಾಪ್ರಭುತ್ವದ ಹತ್ಯೆಯಂತಹ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. </p> <p>ಸಂದೇಶ್ಖಾಲಿಯ ಕೆಲವು ಭಾಗಗಳಲ್ಲಿ ನಿಷೇಧಾಜ್ಞೆ ಇನ್ನೂ ಜಾರಿಯಲ್ಲಿದೆ. ಶೇಖ್ ಶಾಜಹಾನ್ ಮತ್ತು ಅವರ ಸಹೋದರ ಸಿರಾಜುದ್ದೀನ್ ಶೇಖ್ ಸೇರಿದಂತೆ ಸ್ಥಳೀಯ ಟಿಎಂಸಿ ನಾಯಕರು ಭೂಕಬಳಿಕೆ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನೆಗಳು ನಡೆದಿವೆ.</p> <p>ಘಟನೆ ಬಳಿಕ ಈ ಪ್ರದೇಶಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಎಸ್ಟಿಎಸ್ಸಿ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿದ್ದಾರೆ. ಪೊಲೀಸ್ ಮಹಾನಿರ್ದೇಶಕರು ಕೂಡ ಎರಡು ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿ ಗ್ರಾಮಸ್ಥರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದ್ದಾರೆ.</p>.ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ಭೇಟಿ ನೀಡಿದ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>