ಚಿಕ್ಕಮಗಳೂರು ದುಬೈನಗರದ ಮುಜಮೀಲ್, ಕೆಫೆಯಲ್ಲಿ ಬಾಂಬ್ ಇರಿಸಿದ್ದ ಶಂಕಿತ ಹಾಗೂ ಇತರರ ಜೊತೆ ಸೇರಿ ಸಂಚು ರೂಪಿಸಿದ್ದ. ಕೆಲ ಪುರಾವೆಗಳನ್ನು ಆಧರಿಸಿ ಮುಜಮೀಲ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಈತನೇ ಪ್ರಮುಖ ಸಂಚುಕೋರ ಎಂಬುದು ಗೊತ್ತಾಗಿದೆ. ಈತನನ್ನು ಬುಧವಾರ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮುಂದುವರಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
ಬ್ರೂಕ್ಫೀಲ್ಡ್ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.