ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮಾಹಿತಿಗೆ ₹25 ಲಕ್ಷ ಬಹುಮಾನ

Last Updated 1 ಸೆಪ್ಟೆಂಬರ್ 2022, 6:27 IST
ಅಕ್ಷರ ಗಾತ್ರ

ನವದೆಹಲಿ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹25 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.

ದಾವೂದ್‌ ಇಬ್ರಾಹಿಂ 1993ರ ಮುಂಬೈ ಸರಣಿ ಬಾಂಬ್‌ ದಾಳಿಯ ರೂವಾರಿಯಾಗಿದ್ದಾನೆ.

ಅದೇ ಹೊತ್ತಿಗೆ ದಾವೂದ್ ಆಪ್ತ ಸಹಾಯಕ ಶಕೀಲ್ ಶೇಖ್ ಅಲಿಯಾಸ್ ಛೋಟಾ ಶಕೀಲ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹20 ಲಕ್ಷ ನಗದು ಬಹುಮಾನ ಘೋಷಿಸಿದೆ.

ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 'ವಾಂಟೆಡ್' ಲಿಸ್ಟ್‌ನಲ್ಲಿರುವ ದಾವೂದ್ ಸಹಚರರಾದ ಹಾಜಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಜಾವೇದ್ ಪಟೇಲ್ ಅಲಿಯಾಸ್ ಜಾವೇದ್ ಚಿಕ್ನಾ ಮತ್ತು ಇಬ್ರಾಹಿಂ ಮುಷ್ತಾಕ್ ಅಬ್ದುಲ್ ರಜಾಕ್ ಮೆಮೊನ್ ಅಲಿಯಾಸ್ ಟೈಗರ್ ಮೆಮೊನ್ ಬಂಧನ ಮಾಹಿತಿಗೆ ತಲಾ ₹15 ಲಕ್ಷ ನಗದು ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT