ನವದೆಹಲಿ: 2008ರಲ್ಲಿ ನಡೆದ ಮುಂಬೈ ದಾಳಿಯ ಸಂಚುಕೋರ ಹಾಗೂ ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀದ್ ಸಯೀದ್ಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಮೂವರು ಪ್ರತ್ಯೇಕತಾವಾದಿಗಳಾದ ಮಸರಾತ್ ಅಲಂ, ಆಸಿಯಾ ಅಂದ್ರಾಬಿ ಮತ್ತು ಶಾಬಿರ್ ಶಾ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ನೀಡಿದೆ.