<p><strong>ನವದೆಹಲಿ</strong>: ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನವದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದೆ.</p>.<p>‘ಆರೋಪಿಗಳಲ್ಲಿ ಒಬ್ಬನಾದ ಕೊಡಾಜೆ ಮೊಹಮ್ಮದ್ ಶರೀಫ್, ಬಹರೇನ್ನಿಂದ ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಬಂಧಿಸಲಾಯಿತು’ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಶರೀಫ್ ಪತ್ತೆಗೆ ಎನ್ಐಎ ಲುಕ್ಔಟ್ ನೋಟಿಸ್ ಹೊರಡಿಸಿತ್ತು.</p>.<p>‘ಬಂಧಿತನಾಗಿರುವ ಶರೀಫ್, ನಿಷೇಧಿತ ಪಿಎಫ್ಐನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯನಾಗಿದ್ದ. ಉದ್ದೇಶಿತ ಕೊಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇತರರಿಗೆ ಸೂಚನೆ ನೀಡುವ ಜವಾಬ್ದಾರಿ ಈತನದಾಗಿತ್ತು’ ಎಂದು ಹೇಳಿದೆ. </p>.<p class="bodytext">ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ಇರಿದು ಹತ್ಯೆ ಮಾಡಲಾಗಿತ್ತು. </p>.<p class="bodytext">2022ರ ಆಗಸ್ಟ್ 4ರಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್ಐಎ ಇದುವರೆಗೆ 20 ಆರೋಪಿಗಳನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ ಒಟ್ಟು 23 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನವದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದೆ.</p>.<p>‘ಆರೋಪಿಗಳಲ್ಲಿ ಒಬ್ಬನಾದ ಕೊಡಾಜೆ ಮೊಹಮ್ಮದ್ ಶರೀಫ್, ಬಹರೇನ್ನಿಂದ ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಬಂಧಿಸಲಾಯಿತು’ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಶರೀಫ್ ಪತ್ತೆಗೆ ಎನ್ಐಎ ಲುಕ್ಔಟ್ ನೋಟಿಸ್ ಹೊರಡಿಸಿತ್ತು.</p>.<p>‘ಬಂಧಿತನಾಗಿರುವ ಶರೀಫ್, ನಿಷೇಧಿತ ಪಿಎಫ್ಐನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯನಾಗಿದ್ದ. ಉದ್ದೇಶಿತ ಕೊಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇತರರಿಗೆ ಸೂಚನೆ ನೀಡುವ ಜವಾಬ್ದಾರಿ ಈತನದಾಗಿತ್ತು’ ಎಂದು ಹೇಳಿದೆ. </p>.<p class="bodytext">ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ಇರಿದು ಹತ್ಯೆ ಮಾಡಲಾಗಿತ್ತು. </p>.<p class="bodytext">2022ರ ಆಗಸ್ಟ್ 4ರಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್ಐಎ ಇದುವರೆಗೆ 20 ಆರೋಪಿಗಳನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ ಒಟ್ಟು 23 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>