<p><strong>ನವದೆಹಲಿ</strong>: ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (ಪಿಎಫ್ಐ) ದುಬೈನಿಂದ ಹಣಕಾಸು ಒದಗಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ಬಂಧಿಸಿದೆ.</p>.<p>ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬುವರನ್ನು ಎನ್ಐಎ ತಂಡ ಶನಿವಾರ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಈತ ದುಬೈನಿಂದ ದೆಹಲಿಗೆ ಬಂದಿಳಿದ ಕೂಡಲೇ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎನ್ಐಎ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪಿಎಫ್ಐನ ತರಬೇತಿ ಪಡೆದ ಕಾರ್ಯಕರ್ತನಾದ ಆಲಂ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿತ್ತು. ಅಲ್ಲದೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಸಹ ಜಾರಿಯಾಗಿತ್ತು ಎಂದು ಎನ್ಐಎ ಹೇಳಿದೆ.</p>.<p>ಆರೋಪಿಯು ದುಬೈನಿಂದ ಬಿಹಾರದ ಪಿಎಫ್ಐ ಕಾರ್ಯಕರ್ತರಿಗೆ ಯುಎಇ, ಕರ್ನಾಟಕ ಮತ್ತು ಕೇರಳ ಮೂಲದ ಸಿಂಡಿಕೇಟ್ನಿಂದ ಅಕ್ರಮವಾಗಿ ಹಣ ರವಾನಿಸುವಲ್ಲಿ ತೊಡಗಿಸಿಕೊಂಡಿದ್ದ ಎಂದು ಪ್ರಕಟಣೆ ಮಾಹಿತಿ ನೀಡಿದೆ.</p>.<p>ಹೀಗೆ ದೊರೆತ ಹಣವನ್ನು ನಿಷೇಧಿತ ಸಂಘಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳನ್ನು ನಡೆಸಲು ಬಳಸಲಾಗುತ್ತಿತ್ತು ಎಂದು ಎನ್ಐಎ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (ಪಿಎಫ್ಐ) ದುಬೈನಿಂದ ಹಣಕಾಸು ಒದಗಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ಬಂಧಿಸಿದೆ.</p>.<p>ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬುವರನ್ನು ಎನ್ಐಎ ತಂಡ ಶನಿವಾರ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಈತ ದುಬೈನಿಂದ ದೆಹಲಿಗೆ ಬಂದಿಳಿದ ಕೂಡಲೇ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎನ್ಐಎ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪಿಎಫ್ಐನ ತರಬೇತಿ ಪಡೆದ ಕಾರ್ಯಕರ್ತನಾದ ಆಲಂ ವಿರುದ್ಧ ವಿಶೇಷ ಎನ್ಐಎ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿತ್ತು. ಅಲ್ಲದೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಸಹ ಜಾರಿಯಾಗಿತ್ತು ಎಂದು ಎನ್ಐಎ ಹೇಳಿದೆ.</p>.<p>ಆರೋಪಿಯು ದುಬೈನಿಂದ ಬಿಹಾರದ ಪಿಎಫ್ಐ ಕಾರ್ಯಕರ್ತರಿಗೆ ಯುಎಇ, ಕರ್ನಾಟಕ ಮತ್ತು ಕೇರಳ ಮೂಲದ ಸಿಂಡಿಕೇಟ್ನಿಂದ ಅಕ್ರಮವಾಗಿ ಹಣ ರವಾನಿಸುವಲ್ಲಿ ತೊಡಗಿಸಿಕೊಂಡಿದ್ದ ಎಂದು ಪ್ರಕಟಣೆ ಮಾಹಿತಿ ನೀಡಿದೆ.</p>.<p>ಹೀಗೆ ದೊರೆತ ಹಣವನ್ನು ನಿಷೇಧಿತ ಸಂಘಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳನ್ನು ನಡೆಸಲು ಬಳಸಲಾಗುತ್ತಿತ್ತು ಎಂದು ಎನ್ಐಎ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>