<p><strong>ನವದೆಹಲಿ:</strong> ಭಯೋತ್ಪಾದಕ ಸಂಘಟನೆ ಐಎಸ್ಗೆ (ಐಸಿಸ್) ಸಹಕಾರ ನೀಡಿದ್ದರು ಎನ್ನಲಾದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.</p>.<p>ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ ವಾಲ ಮತ್ತು ತಲ್ಹಾ ಖಾನ್ ಬಂಧಿತರು. 2023ರಿಂದಲೂ ಈ ಇಬ್ಬರು ತಲೆಮರೆಸಿಕೊಂಡಿದ್ದರು. ಇಬ್ಬರ ವಿರುದ್ಧ ಮುಂಬೈನ ಎನ್ಐಎ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇವರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹3 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಪುಣೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಪರೀಕ್ಷೆ ನಡೆಸಿದ್ದ 2023ರ ಪ್ರಕರಣದಲ್ಲಿ ಇಬ್ಬರೂ ಪೊಲೀಸರಿಗೆ ಬೇಕಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶುಕ್ರವಾರ ರಾತ್ರಿ ಇಂಡೋನೇಷ್ಯಾದ ಜಕಾರ್ತದಿಂದ ಇಬ್ಬರೂ ಮುಂಬೈ ವಿಮಾನ ನಿಲ್ದಾಣ ಮೂಲಕ ಭಾರತಕ್ಕೆ ವಾಪಸಾಗುತ್ತಿದ್ದರು. ಎರಡನೇ ಟರ್ಮಿನಲ್ನಲ್ಲಿ ವಲಸೆ ವಿಭಾಗದ ಅಧಿಕಾರಿಗಳ ತಪಾಸಣೆ ವೇಳೆ ಮರೆಮಾಚಿಕೊಂಡು ಹೋಗಲು ಯತ್ನಿಸಿದಾಗ ವಶಕ್ಕೆ ಪಡೆಯಲಾಯಿತು ಎಂದು ಎನ್ಐಎ ತಿಳಿಸಿದೆ.</p>.<p>ಪುಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ಗೆ ಸಹಕರಿಸಿದ್ದ 10 ಮಂದಿ ವಿರುದ್ಧ ಎನ್ಐಎ ದೋಷಾರೋಪಣಾ ಪಟ್ಟಿ ಸಲ್ಲಿಸಿತ್ತು. 8 ಮಂದಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಹಿಂಸಾಚಾರ ಮತ್ತು ಭಯೋತ್ಪಾದಕ ಕೃತ್ಯ ನಡೆಸಿ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಈ ತಂಡ ಸಂಚು ರೂಪಿಸಿತ್ತು. 2022–23ರಲ್ಲಿ ಬಾಡಿಗೆ ಮನೆ ಪಡೆದಿದ್ದ ಶಂಕಿತರು ಬಾಂಬ್ ತಯಾರಿ ಮತ್ತು ತರಬೇತಿ ಕಾರ್ಯಾಗಾರ ಆಯೋಜನೆ ಮಾಡಿದ್ದರು. ಕಚ್ಚಾ ಬಾಂಬ್ ಸ್ಫೋಟ ಪ್ರಯೋಗವನ್ನೂ ನಡೆಸಿದ್ದರು ಎಂದು ಎನ್ಐಎ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದಕ ಸಂಘಟನೆ ಐಎಸ್ಗೆ (ಐಸಿಸ್) ಸಹಕಾರ ನೀಡಿದ್ದರು ಎನ್ನಲಾದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.</p>.<p>ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ ವಾಲ ಮತ್ತು ತಲ್ಹಾ ಖಾನ್ ಬಂಧಿತರು. 2023ರಿಂದಲೂ ಈ ಇಬ್ಬರು ತಲೆಮರೆಸಿಕೊಂಡಿದ್ದರು. ಇಬ್ಬರ ವಿರುದ್ಧ ಮುಂಬೈನ ಎನ್ಐಎ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇವರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹3 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಪುಣೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಪರೀಕ್ಷೆ ನಡೆಸಿದ್ದ 2023ರ ಪ್ರಕರಣದಲ್ಲಿ ಇಬ್ಬರೂ ಪೊಲೀಸರಿಗೆ ಬೇಕಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶುಕ್ರವಾರ ರಾತ್ರಿ ಇಂಡೋನೇಷ್ಯಾದ ಜಕಾರ್ತದಿಂದ ಇಬ್ಬರೂ ಮುಂಬೈ ವಿಮಾನ ನಿಲ್ದಾಣ ಮೂಲಕ ಭಾರತಕ್ಕೆ ವಾಪಸಾಗುತ್ತಿದ್ದರು. ಎರಡನೇ ಟರ್ಮಿನಲ್ನಲ್ಲಿ ವಲಸೆ ವಿಭಾಗದ ಅಧಿಕಾರಿಗಳ ತಪಾಸಣೆ ವೇಳೆ ಮರೆಮಾಚಿಕೊಂಡು ಹೋಗಲು ಯತ್ನಿಸಿದಾಗ ವಶಕ್ಕೆ ಪಡೆಯಲಾಯಿತು ಎಂದು ಎನ್ಐಎ ತಿಳಿಸಿದೆ.</p>.<p>ಪುಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ಗೆ ಸಹಕರಿಸಿದ್ದ 10 ಮಂದಿ ವಿರುದ್ಧ ಎನ್ಐಎ ದೋಷಾರೋಪಣಾ ಪಟ್ಟಿ ಸಲ್ಲಿಸಿತ್ತು. 8 ಮಂದಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>ಹಿಂಸಾಚಾರ ಮತ್ತು ಭಯೋತ್ಪಾದಕ ಕೃತ್ಯ ನಡೆಸಿ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಈ ತಂಡ ಸಂಚು ರೂಪಿಸಿತ್ತು. 2022–23ರಲ್ಲಿ ಬಾಡಿಗೆ ಮನೆ ಪಡೆದಿದ್ದ ಶಂಕಿತರು ಬಾಂಬ್ ತಯಾರಿ ಮತ್ತು ತರಬೇತಿ ಕಾರ್ಯಾಗಾರ ಆಯೋಜನೆ ಮಾಡಿದ್ದರು. ಕಚ್ಚಾ ಬಾಂಬ್ ಸ್ಫೋಟ ಪ್ರಯೋಗವನ್ನೂ ನಡೆಸಿದ್ದರು ಎಂದು ಎನ್ಐಎ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>