<p><strong>ನವದೆಹಲಿ</strong>: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮತ್ತೆ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪೈಕಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. </p>.<p>ಆರೋಪಿಗಳಾದ ಅಬ್ದುಲ್ ನಾಸೀರ್, ನೌಶದ್, ಅಬ್ದುಲ್ ರಹಮಾನ್ ಹಾಗೂ ಅತೀಕ್ ಅಹ್ಮದ್ ವಿರುದ್ಧ ಎರಡನೇ ಪೂರಕ ಆರೋಪ ಪಟ್ಟಿ ದಾಖಲಿಸಿದೆ. </p>.<p>ಎನ್ಐಎ ತನಿಖೆ ಪ್ರಕಾರ, ನಾಸೀರ್, ನೌಶದ್ ಹಾಗೂ ರಹಮಾನ್ ಅವರು ಹತ್ಯೆ ನಡೆಸಿದ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ಈರೋಡ್ನಲ್ಲಿ ಆಶ್ರಯ ಕಲ್ಪಿಸಿದ್ದರು ಎಂದು ತಿಳಿಸಿದೆ.</p>.<p class="title">ಈ ಮೂಲಕ ಈ ಪ್ರಕರಣದಲ್ಲಿ 27 ಮಂದಿ ವಿರುದ್ಧ ಆರೋಪಪಟ್ಟಿ ದಾಖಲಿಸಿದಂತಾಗಿದೆ. ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ. </p>.<p class="title">2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಎರಡು ಮೋಟರ್ ಸೈಕಲ್ನಲ್ಲಿ ಬಂದಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಕಾರ್ಯಕರ್ತರು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮತ್ತೆ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ. ಈ ಪೈಕಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. </p>.<p>ಆರೋಪಿಗಳಾದ ಅಬ್ದುಲ್ ನಾಸೀರ್, ನೌಶದ್, ಅಬ್ದುಲ್ ರಹಮಾನ್ ಹಾಗೂ ಅತೀಕ್ ಅಹ್ಮದ್ ವಿರುದ್ಧ ಎರಡನೇ ಪೂರಕ ಆರೋಪ ಪಟ್ಟಿ ದಾಖಲಿಸಿದೆ. </p>.<p>ಎನ್ಐಎ ತನಿಖೆ ಪ್ರಕಾರ, ನಾಸೀರ್, ನೌಶದ್ ಹಾಗೂ ರಹಮಾನ್ ಅವರು ಹತ್ಯೆ ನಡೆಸಿದ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ಈರೋಡ್ನಲ್ಲಿ ಆಶ್ರಯ ಕಲ್ಪಿಸಿದ್ದರು ಎಂದು ತಿಳಿಸಿದೆ.</p>.<p class="title">ಈ ಮೂಲಕ ಈ ಪ್ರಕರಣದಲ್ಲಿ 27 ಮಂದಿ ವಿರುದ್ಧ ಆರೋಪಪಟ್ಟಿ ದಾಖಲಿಸಿದಂತಾಗಿದೆ. ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ. </p>.<p class="title">2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಎರಡು ಮೋಟರ್ ಸೈಕಲ್ನಲ್ಲಿ ಬಂದಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಕಾರ್ಯಕರ್ತರು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>