ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲ್ಲೂಕಿನ ಕೆಲವೆಡೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ. ಇಸ್ಲಾಮಿಕ್ ಸ್ಟೇಟ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದವರ ಶೋಧಕ್ಕಾಗಿ ಎನ್ಐಎ ತಂಡ ಜಿಲ್ಲೆಗೆ ಭೇಟಿ ನೀಡಿದೆ. ಹೆಚ್ಚಿನ ಮಾಹಿತಿ ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.