<p><strong>ಕೊಚ್ಚಿ</strong> : ಭಯೋತ್ಪಾದಕ ಸಂಘಟನೆ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದ ಕೊಯಮತ್ತೂರಿನ ಇಬ್ಬರನ್ನು ದೋಷಿಗಳು ಎಂದು ಎನ್ಐಎ ನ್ಯಾಯಾಲಯ ಶನಿವಾರ ಆದೇಶಿಸಿದೆ.</p>.<p>ಕೊಯಮತ್ತೂರಿನ ಉಕ್ಕಡಂನ ಅನ್ಬು ನಗರದ ಮಹಮ್ಮದ್ ಅಜರುದ್ದೀನ್ (27) ಹಾಗೂ ದಕ್ಷಿಣ ಉಕ್ಕಡಂನ ಶೇಕ್ ಹಿದಾಯತುಲ್ಲಾ ಅಲಿಯಾಸ್ ಫಿರೋಜ್ ಖಾನ್ (35) ಶಿಕ್ಷೆಗೊಳಗಾದವರು.</p>.<p>ತಮಿಳುನಾಡಿನ ಕೊಯಮತ್ತೂರಿನಲ್ಲಿ ಈ ಇಬ್ಬರೂ ಐಸಿಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.</p>.<p>ವಿಚಾರಣೆ ಸಮಯದಲ್ಲಿ ಅಪರಾಧಿಗಳಿಬ್ಬರೂ ತಮ್ಮ ಕುಟುಂಬದ ಪರಿಸ್ಥಿತಿಯನ್ನು ಉಲ್ಲೇಖಿಸಿ, ಶಿಕ್ಷೆ ಕಡಿಮೆ ಮಾಡುವಂತೆ ನ್ಯಾಯಾಲಯಕ್ಕೆ ವಿನಂತಿಸಿದ್ದಾರೆ.</p>.<p>ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಲಿದ್ದು, ಆರೋಪಿಗಳಿಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೊಚ್ಚಿಯ ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಎನ್. ಶೇಷಾದ್ರಿನಾಥನ್ ಪೊಲೀಸರಿಗೆ ಸೂಚಿಸಿದ್ದಾರೆ.</p>.<p>ಐಸಿಸ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇವರಿಬ್ಬರ ವಿರುದ್ಧ ಮಾತ್ರ 2019ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.</p>.<p>ಎನ್ಐಎ ನ್ಯಾಯಾಲಯವು 40 ಸಾಕ್ಷ್ಯಗಳ ಪರಿಶೀಲನೆ ನಡೆಸಿತು. ಕೊಯಮತ್ತೂರಿನಲ್ಲೇ ನಡೆದಿದ್ದ ಸ್ಫೋಟಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅಜರುದ್ದೀನ್ ಆರೋಪಿ ಆಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong> : ಭಯೋತ್ಪಾದಕ ಸಂಘಟನೆ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದ ಕೊಯಮತ್ತೂರಿನ ಇಬ್ಬರನ್ನು ದೋಷಿಗಳು ಎಂದು ಎನ್ಐಎ ನ್ಯಾಯಾಲಯ ಶನಿವಾರ ಆದೇಶಿಸಿದೆ.</p>.<p>ಕೊಯಮತ್ತೂರಿನ ಉಕ್ಕಡಂನ ಅನ್ಬು ನಗರದ ಮಹಮ್ಮದ್ ಅಜರುದ್ದೀನ್ (27) ಹಾಗೂ ದಕ್ಷಿಣ ಉಕ್ಕಡಂನ ಶೇಕ್ ಹಿದಾಯತುಲ್ಲಾ ಅಲಿಯಾಸ್ ಫಿರೋಜ್ ಖಾನ್ (35) ಶಿಕ್ಷೆಗೊಳಗಾದವರು.</p>.<p>ತಮಿಳುನಾಡಿನ ಕೊಯಮತ್ತೂರಿನಲ್ಲಿ ಈ ಇಬ್ಬರೂ ಐಸಿಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.</p>.<p>ವಿಚಾರಣೆ ಸಮಯದಲ್ಲಿ ಅಪರಾಧಿಗಳಿಬ್ಬರೂ ತಮ್ಮ ಕುಟುಂಬದ ಪರಿಸ್ಥಿತಿಯನ್ನು ಉಲ್ಲೇಖಿಸಿ, ಶಿಕ್ಷೆ ಕಡಿಮೆ ಮಾಡುವಂತೆ ನ್ಯಾಯಾಲಯಕ್ಕೆ ವಿನಂತಿಸಿದ್ದಾರೆ.</p>.<p>ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಲಿದ್ದು, ಆರೋಪಿಗಳಿಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೊಚ್ಚಿಯ ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಎನ್. ಶೇಷಾದ್ರಿನಾಥನ್ ಪೊಲೀಸರಿಗೆ ಸೂಚಿಸಿದ್ದಾರೆ.</p>.<p>ಐಸಿಸ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇವರಿಬ್ಬರ ವಿರುದ್ಧ ಮಾತ್ರ 2019ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.</p>.<p>ಎನ್ಐಎ ನ್ಯಾಯಾಲಯವು 40 ಸಾಕ್ಷ್ಯಗಳ ಪರಿಶೀಲನೆ ನಡೆಸಿತು. ಕೊಯಮತ್ತೂರಿನಲ್ಲೇ ನಡೆದಿದ್ದ ಸ್ಫೋಟಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅಜರುದ್ದೀನ್ ಆರೋಪಿ ಆಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>