<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಚುನಾವಣೆಯ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ ನಾಯಕ ಸೇರಿದಂತೆ ಏಳು ಜನರನ್ನು ಎನ್ಐಎ ಭಾನುವಾರ ವಶಕ್ಕೆ ಪಡೆದಿದೆ. ಜತೆಗೆ, ಐಎಸ್ಎಫ್ ಸದಸ್ಯನಾಗಿರುವ ಪಂಚಾಯತ್ ಸದಸ್ಯನ್ನು ಬಂಧಿಸಿದೆ. </p>.<p>ಎಸ್ಐಆರ್ ಪ್ರಕ್ರಿಯೆಯಿಂದ ಹೆಸರುಗಳನ್ನು ಅಳಿಸಿಹಾಕಿದ್ದನ್ನು ಪ್ರತಿಭಟಿಸಿ ಮಾಲ್ಡಾದಲ್ಲಿ ನ್ಯಾಯಾಂಗ ಅಧಿಕಾರಿಗಳನ್ನು ಸ್ಥಳೀಯರು ಘೇರಾವ್ ಹಾಕಿದ್ದರು. ಪ್ರಕರಣದ ತನಿಖೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ಮೊಥಾಬಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಯೇಮ್ ಚೌಧರಿ ಅವರನ್ನು ಅಲಿನಗರ ಪಂಚಾಯತ್ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಅವರ ಕೆಲವು ಆಪ್ತರೊಂದಿಗೆ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜ್ಯ ಪೊಲೀಸರು ಈ ಹಿಂದೆ ಬಂಧಿಸಿದ್ದ ಎಐಎಂಐಎಂ ಸದಸ್ಯ ಮೊಫಕ್ಕರುಲ್ ಇಸ್ಲಾಂ ಅವರು ವಿಚಾರಣೆ ವೇಳೆ ನೀಡಿದ್ದ ಸುಳಿವುಗಳ ಆಧಾರದ ಮೇಲೆ ಐಎಸ್ಎಫ್ನ ಗ್ರಾಮ ಪಂಚಾಯತ್ ಸದಸ್ಯ ಗುಲಾಮ್ ರಬ್ಬಾನಿ ಅವರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿ ಹೇಳಿದ್ದಾರೆ. </p>.<p>ಘೇರಾವ್ ಘಟನೆಯು ಏಪ್ರಿಲ್ 1ರಂದು ನಡೆದಿತ್ತು. ಸುಪ್ರೀಂ ಕೋರ್ಟ್ನ ನಿರ್ದೇಶದನ ಮೇರೆಗೆ ಚುನಾವಣಾ ಆಯೋಗವು ತನಿಖೆಯನ್ನು ಎನ್ಐಎಗೆ ವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಚುನಾವಣೆಯ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ ನಾಯಕ ಸೇರಿದಂತೆ ಏಳು ಜನರನ್ನು ಎನ್ಐಎ ಭಾನುವಾರ ವಶಕ್ಕೆ ಪಡೆದಿದೆ. ಜತೆಗೆ, ಐಎಸ್ಎಫ್ ಸದಸ್ಯನಾಗಿರುವ ಪಂಚಾಯತ್ ಸದಸ್ಯನ್ನು ಬಂಧಿಸಿದೆ. </p>.<p>ಎಸ್ಐಆರ್ ಪ್ರಕ್ರಿಯೆಯಿಂದ ಹೆಸರುಗಳನ್ನು ಅಳಿಸಿಹಾಕಿದ್ದನ್ನು ಪ್ರತಿಭಟಿಸಿ ಮಾಲ್ಡಾದಲ್ಲಿ ನ್ಯಾಯಾಂಗ ಅಧಿಕಾರಿಗಳನ್ನು ಸ್ಥಳೀಯರು ಘೇರಾವ್ ಹಾಕಿದ್ದರು. ಪ್ರಕರಣದ ತನಿಖೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ಮೊಥಾಬಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಯೇಮ್ ಚೌಧರಿ ಅವರನ್ನು ಅಲಿನಗರ ಪಂಚಾಯತ್ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಅವರ ಕೆಲವು ಆಪ್ತರೊಂದಿಗೆ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜ್ಯ ಪೊಲೀಸರು ಈ ಹಿಂದೆ ಬಂಧಿಸಿದ್ದ ಎಐಎಂಐಎಂ ಸದಸ್ಯ ಮೊಫಕ್ಕರುಲ್ ಇಸ್ಲಾಂ ಅವರು ವಿಚಾರಣೆ ವೇಳೆ ನೀಡಿದ್ದ ಸುಳಿವುಗಳ ಆಧಾರದ ಮೇಲೆ ಐಎಸ್ಎಫ್ನ ಗ್ರಾಮ ಪಂಚಾಯತ್ ಸದಸ್ಯ ಗುಲಾಮ್ ರಬ್ಬಾನಿ ಅವರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿ ಹೇಳಿದ್ದಾರೆ. </p>.<p>ಘೇರಾವ್ ಘಟನೆಯು ಏಪ್ರಿಲ್ 1ರಂದು ನಡೆದಿತ್ತು. ಸುಪ್ರೀಂ ಕೋರ್ಟ್ನ ನಿರ್ದೇಶದನ ಮೇರೆಗೆ ಚುನಾವಣಾ ಆಯೋಗವು ತನಿಖೆಯನ್ನು ಎನ್ಐಎಗೆ ವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>