<p><strong>ಮುಂಬೈ:</strong> 26/11 ಭಯೋತ್ಪಾದಕ ದಾಳಿ ಪ್ರಕರಣದ ತನಿಖೆ ಸಂಬಂಧ ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ಮುಂಬೈ ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶುಕ್ರವಾರ ತಿಳಿಸಿದ್ದಾರೆ.</p>.<p>ಸಂಚುಕೋರ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸಿದ ಮರುದಿನವೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ರಾಣಾನನ್ನು ಎನ್ಐಎ ನವದೆಹಲಿಯಿಂದ ಮುಂಬೈಗೆ ಕರೆ ತರಲಿದೆಯೇ ಎಂದು ಕೇಳಿದಾಗ, ‘ಅದು ಕೇಂದ್ರ ತನಿಖಾ ಏಜೆನ್ಸಿಯ ತೀರ್ಮಾನ. ರಾಣಾನನ್ನು ಎಲ್ಲಿಗೆ ಕರೆದೊಯ್ಯಬೇಕು ಎಂಬುದನ್ನು ಕೇಂದ್ರ ಗೃಹ ಸಚಿವಾಲಯ ಮತ್ತು ಎನ್ಐಎ ನಿರ್ಧರಿಸಲಿವೆ’ ಎಂದು ಫಡಣವೀಸ್ ಮುಂಬೈನಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಈ ಪ್ರಕರಣದ ತನಿಖೆಯಲ್ಲಿ ಎನ್ಐಎಗೆ ಅಗತ್ಯವಿರುವ ಯಾವುದೇ ಮಾಹಿತಿ ಮತ್ತು ನೆರವನ್ನು ಮಹಾರಾಷ್ಟ್ರ ಸರ್ಕಾರ ನೀಡಲಿದೆ. ತನಿಖೆಯ ಬಗ್ಗೆ ನಮಗೆ ಯಾವುದೇ ಮಾಹಿತಿಯ ಅಗತ್ಯವಿದ್ದರೆ, ಕೇಂದ್ರದ ಏಜೆನ್ಸಿ ಜತೆಗೆ ನಮ್ಮ ಪೊಲೀಸರು ಸಮನ್ವಯ ಸಾಧಿಸಲಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 26/11 ಭಯೋತ್ಪಾದಕ ದಾಳಿ ಪ್ರಕರಣದ ತನಿಖೆ ಸಂಬಂಧ ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ಮುಂಬೈ ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶುಕ್ರವಾರ ತಿಳಿಸಿದ್ದಾರೆ.</p>.<p>ಸಂಚುಕೋರ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸಿದ ಮರುದಿನವೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>ರಾಣಾನನ್ನು ಎನ್ಐಎ ನವದೆಹಲಿಯಿಂದ ಮುಂಬೈಗೆ ಕರೆ ತರಲಿದೆಯೇ ಎಂದು ಕೇಳಿದಾಗ, ‘ಅದು ಕೇಂದ್ರ ತನಿಖಾ ಏಜೆನ್ಸಿಯ ತೀರ್ಮಾನ. ರಾಣಾನನ್ನು ಎಲ್ಲಿಗೆ ಕರೆದೊಯ್ಯಬೇಕು ಎಂಬುದನ್ನು ಕೇಂದ್ರ ಗೃಹ ಸಚಿವಾಲಯ ಮತ್ತು ಎನ್ಐಎ ನಿರ್ಧರಿಸಲಿವೆ’ ಎಂದು ಫಡಣವೀಸ್ ಮುಂಬೈನಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಈ ಪ್ರಕರಣದ ತನಿಖೆಯಲ್ಲಿ ಎನ್ಐಎಗೆ ಅಗತ್ಯವಿರುವ ಯಾವುದೇ ಮಾಹಿತಿ ಮತ್ತು ನೆರವನ್ನು ಮಹಾರಾಷ್ಟ್ರ ಸರ್ಕಾರ ನೀಡಲಿದೆ. ತನಿಖೆಯ ಬಗ್ಗೆ ನಮಗೆ ಯಾವುದೇ ಮಾಹಿತಿಯ ಅಗತ್ಯವಿದ್ದರೆ, ಕೇಂದ್ರದ ಏಜೆನ್ಸಿ ಜತೆಗೆ ನಮ್ಮ ಪೊಲೀಸರು ಸಮನ್ವಯ ಸಾಧಿಸಲಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>