<p><strong>ನವದೆಹಲಿ:</strong> ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದಿರುವ ನಾಗರಿಕರ ಹತ್ಯೆಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಭಯೋತ್ಪಾದನೆಯ ಆಯಾಮವನ್ನು ಮುಂದಿಟ್ಟುಕೊಂಡು ತನಿಖೆ ನಡೆಯುವ ನಿರೀಕ್ಷೆ ಇದೆ.</p>.<p><strong>ಓದಿ:</strong><a href="https://www.prajavani.net/india-news/amit-shah-meets-pm-narendra-modi-discusses-security-situation-in-kashmir-876740.html" itemprop="url">ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಜತೆ ಅಮಿತ್ ಶಾ ಮಾತುಕತೆ</a></p>.<p>ಸೋಮವಾರ ನಡೆದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮಾವೇಶದಲ್ಲಿಯೂ ಕಾಶ್ಮೀರ ವಿಚಾರ ಚರ್ಚೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<p>ನಾಗರಿಕರ ಹತ್ಯೆಯಿಂದಾಗಿ ವಲಸಿಗರು ಕಾಶ್ಮೀರ ತೊರೆಯುತ್ತಿರುವುದಲ್ಲದೆ ಸ್ಥಳೀಯರೂ ಭೀತಿಗೆ ಒಳಗಾಗುವಂತಾಗಿದೆ. ಸರ್ಕಾರವು ಕೈಗೊಂಡ ಕ್ರಮಗಳಿಂದ ಕಾಶ್ಮೀರಕ್ಕೆ ಮರಳಲು ಬಯಸಿರುವ ಕಾಶ್ಮೀರಿ ಪಂಡಿತ ಸಮುದಾಯದವರಲ್ಲಿಯೂ ಆತಂಕಕ್ಕೆ ಕಾರಣವಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ಎನ್ಐಎಯ ಸ್ಥಳೀಯ ತಂಡವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ತನಿಖೆಗೆ ನೆರವಾಗುತ್ತಿದೆ. ಹತ್ಯೆಯ ಹಿಂದಿರುವ ಸಂಚುಕೋರರ ಬಗ್ಗೆ ಮಾಹಿತಿ ಕಲೆಹಾಕಲು ಯತ್ನಿಸುತ್ತಿದೆ ಎನ್ನಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/terrorist-attack-on-migrant-workers-in-kashmir-seems-death-is-chasing-me-migrant-workers-in-kashmir-876472.html" target="_blank">ಸಾವು ಹಿಂಬಾಲಿಸುತ್ತಿರುವಂತಿದೆ: ಕಾಶ್ಮೀರದ ವಲಸೆ ಕಾರ್ಮಿಕರ ಆತಂಕ</a></p>.<p>ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದಿರುವ ನಾಗರಿಕರ ಹತ್ಯೆಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಭಯೋತ್ಪಾದನೆಯ ಆಯಾಮವನ್ನು ಮುಂದಿಟ್ಟುಕೊಂಡು ತನಿಖೆ ನಡೆಯುವ ನಿರೀಕ್ಷೆ ಇದೆ.</p>.<p><strong>ಓದಿ:</strong><a href="https://www.prajavani.net/india-news/amit-shah-meets-pm-narendra-modi-discusses-security-situation-in-kashmir-876740.html" itemprop="url">ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಜತೆ ಅಮಿತ್ ಶಾ ಮಾತುಕತೆ</a></p>.<p>ಸೋಮವಾರ ನಡೆದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮಾವೇಶದಲ್ಲಿಯೂ ಕಾಶ್ಮೀರ ವಿಚಾರ ಚರ್ಚೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<p>ನಾಗರಿಕರ ಹತ್ಯೆಯಿಂದಾಗಿ ವಲಸಿಗರು ಕಾಶ್ಮೀರ ತೊರೆಯುತ್ತಿರುವುದಲ್ಲದೆ ಸ್ಥಳೀಯರೂ ಭೀತಿಗೆ ಒಳಗಾಗುವಂತಾಗಿದೆ. ಸರ್ಕಾರವು ಕೈಗೊಂಡ ಕ್ರಮಗಳಿಂದ ಕಾಶ್ಮೀರಕ್ಕೆ ಮರಳಲು ಬಯಸಿರುವ ಕಾಶ್ಮೀರಿ ಪಂಡಿತ ಸಮುದಾಯದವರಲ್ಲಿಯೂ ಆತಂಕಕ್ಕೆ ಕಾರಣವಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ಎನ್ಐಎಯ ಸ್ಥಳೀಯ ತಂಡವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ತನಿಖೆಗೆ ನೆರವಾಗುತ್ತಿದೆ. ಹತ್ಯೆಯ ಹಿಂದಿರುವ ಸಂಚುಕೋರರ ಬಗ್ಗೆ ಮಾಹಿತಿ ಕಲೆಹಾಕಲು ಯತ್ನಿಸುತ್ತಿದೆ ಎನ್ನಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/terrorist-attack-on-migrant-workers-in-kashmir-seems-death-is-chasing-me-migrant-workers-in-kashmir-876472.html" target="_blank">ಸಾವು ಹಿಂಬಾಲಿಸುತ್ತಿರುವಂತಿದೆ: ಕಾಶ್ಮೀರದ ವಲಸೆ ಕಾರ್ಮಿಕರ ಆತಂಕ</a></p>.<p>ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>