<p><strong>ನವದೆಹಲಿ:</strong> ಎಸ್ಐಆರ್ ಕಾರ್ಯದ ವೇಳೆ 7 ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿ ಹಾಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ.</p><p>ಎಸ್ಐಆರ್ ಬಳಿಕ ಚುನಾವಣಾ ಆಯೋಗವು ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಇಲ್ಲದವರು ಸಲ್ಲಿಸಿದ್ದ ಆಕ್ಷೇಪಣೆಗಳ ವಿಚಾರಣೆ ನಡೆಸುತ್ತಿದ್ದ ವೇಳೆ ನ್ಯಾಯಾಂಗ ಅಧಿಕಾರಿಗಳನ್ನು ಘೇರಾವ್ ಹಾಕಿ ಅವರ ಮೇಲೆ ದಾಳಿ ನಡೆಸಲಾಗಿತ್ತು. ತಡ ರಾತ್ರಿಯವರೆಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಲಾಗಿತ್ತು.</p><p>ಸುಪ್ರೀಂ ಕೋರ್ಟ್ ತನ್ನ ಪೂರ್ಣ ಅಧಿಕಾರ ಬಳಸಿ ಪಶ್ಚಿಮ ಬಂಗಾಳ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ ಮಲ್ಯಾ ಬಾಗ್ಚಿ ಮತ್ತು ವಿಫುಲ್ ಎಂ. ಪಂಚೋಲಿ ಅವರ ಪೀಠವು ಘಟನೆ ಕುರಿತು ಸೋಮವಾರ ವಿಚಾರಣೆ ನಡೆಸಿತು.</p><p>ಪಶ್ಚಿಮ ಬಂಗಾಳದ ಮಾಲದಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು ಘಟನೆ ನಡೆದಿದೆ. ಆಕ್ಷೇಪಣೆಗಳ ವಿಚಾರಣೆ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು.</p><p>ಈ ಪ್ರಕರಣ ಸಂಬಂಧ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಇವರನ್ನು ತನಿಖೆಗೆ ಒಳಪಡಿಸಬಹುದು ಎಂದು ಪೀಠ ಹೇಳಿದೆ.</p><p>‘ಘಟನೆ ನಡೆದ ದಿನದಂದು ಕೋಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ದುಶ್ಯಂತ್ ನಾರಿಯಾಲಾ ಅವರಿಗೆ ಕರೆ ಮಾಡಿದ್ದರು. ಆದರೆ, ದುಶ್ಯಂತ್ ಅವರು ಕರೆ ಸ್ವೀಕರಿಸಲಿಲ್ಲ. ಇದು ಜಿಲ್ಲಾ ಆಡಳಿತದ ವೈಫಲ್ಯ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಅವರಲ್ಲಿ ದುಶ್ಯಂತ್ ಅವರು ಕ್ಷಮೆ ಕೇಳಬೇಕು’ ಎಂದು ಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಸ್ಐಆರ್ ಕಾರ್ಯದ ವೇಳೆ 7 ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿ ಹಾಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ.</p><p>ಎಸ್ಐಆರ್ ಬಳಿಕ ಚುನಾವಣಾ ಆಯೋಗವು ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಇಲ್ಲದವರು ಸಲ್ಲಿಸಿದ್ದ ಆಕ್ಷೇಪಣೆಗಳ ವಿಚಾರಣೆ ನಡೆಸುತ್ತಿದ್ದ ವೇಳೆ ನ್ಯಾಯಾಂಗ ಅಧಿಕಾರಿಗಳನ್ನು ಘೇರಾವ್ ಹಾಕಿ ಅವರ ಮೇಲೆ ದಾಳಿ ನಡೆಸಲಾಗಿತ್ತು. ತಡ ರಾತ್ರಿಯವರೆಗೂ ಅವರನ್ನು ಕಚೇರಿಯಲ್ಲಿ ಕೂಡಿಹಾಕಲಾಗಿತ್ತು.</p><p>ಸುಪ್ರೀಂ ಕೋರ್ಟ್ ತನ್ನ ಪೂರ್ಣ ಅಧಿಕಾರ ಬಳಸಿ ಪಶ್ಚಿಮ ಬಂಗಾಳ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ ಮಲ್ಯಾ ಬಾಗ್ಚಿ ಮತ್ತು ವಿಫುಲ್ ಎಂ. ಪಂಚೋಲಿ ಅವರ ಪೀಠವು ಘಟನೆ ಕುರಿತು ಸೋಮವಾರ ವಿಚಾರಣೆ ನಡೆಸಿತು.</p><p>ಪಶ್ಚಿಮ ಬಂಗಾಳದ ಮಾಲದಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು ಘಟನೆ ನಡೆದಿದೆ. ಆಕ್ಷೇಪಣೆಗಳ ವಿಚಾರಣೆ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು.</p><p>ಈ ಪ್ರಕರಣ ಸಂಬಂಧ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಇವರನ್ನು ತನಿಖೆಗೆ ಒಳಪಡಿಸಬಹುದು ಎಂದು ಪೀಠ ಹೇಳಿದೆ.</p><p>‘ಘಟನೆ ನಡೆದ ದಿನದಂದು ಕೋಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ದುಶ್ಯಂತ್ ನಾರಿಯಾಲಾ ಅವರಿಗೆ ಕರೆ ಮಾಡಿದ್ದರು. ಆದರೆ, ದುಶ್ಯಂತ್ ಅವರು ಕರೆ ಸ್ವೀಕರಿಸಲಿಲ್ಲ. ಇದು ಜಿಲ್ಲಾ ಆಡಳಿತದ ವೈಫಲ್ಯ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಅವರಲ್ಲಿ ದುಶ್ಯಂತ್ ಅವರು ಕ್ಷಮೆ ಕೇಳಬೇಕು’ ಎಂದು ಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>