<p><strong>ಚೆನ್ನೈ:</strong> ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಮಂಗಳವಾರ ತಮಿಳುನಾಡಿನ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಚೆನ್ನೈ, ತಿರುಚಿರಾಪಳ್ಳಿ, ಮಧುರೈ, ತಿರುನೆಲ್ವೇಲಿ ಮತ್ತು ಕೊಯಮತ್ತೂರು ಜಿಲ್ಲೆಯ ವಿವಿಧೆಡೆ ಐಸಿಸ್ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತರ ನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.</p><p>ಖಚಿತ ಮಾಹಿತಿ ಆಧರಿಸಿ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡುವ ಮತ್ತು ಸದಸ್ಯರನ್ನು ನೇಮಿಸಿಕೊಳ್ಳುವಲ್ಲಿ ತೊಡಗಿದ್ದ ವ್ಯಕ್ತಿಗಳನ್ನು ಗುರಿಯಾಗಿಸಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.</p><p>ದೇಶದ ವಿವಿಧ ರಾಜ್ಯಗಳಲ್ಲಿ ಐಸಿಸ್ಗೆ ಸಂಬಂಧಿಸಿದ ನೇಮಕಾತಿ ಪ್ರಕರಣಗಳ ಕುರಿತು ಎನ್ಐಎ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಐಸಿಸ್ ಬೆಂಬಲಿಗರ ವಿರುದ್ಧ ಕಳೆದ ವರ್ಷ ದಾಖಲಾದ ಪ್ರಕರಣ ಇದಾಗಿದ್ದು, ತನಿಖೆಯ ವೇಳೆ ಆರೋಪಿಗಳ ಪಾತ್ರ ಬಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>2022ರ ಅಕ್ಟೋಬರ್ನಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಐಸಿಸ್ ಪ್ರೇರಿತ ಕಾರು ಬಾಂಬ್ ಸ್ಫೋಟ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಎನ್ಐಎ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಮಂಗಳವಾರ ತಮಿಳುನಾಡಿನ 16 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಚೆನ್ನೈ, ತಿರುಚಿರಾಪಳ್ಳಿ, ಮಧುರೈ, ತಿರುನೆಲ್ವೇಲಿ ಮತ್ತು ಕೊಯಮತ್ತೂರು ಜಿಲ್ಲೆಯ ವಿವಿಧೆಡೆ ಐಸಿಸ್ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತರ ನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.</p><p>ಖಚಿತ ಮಾಹಿತಿ ಆಧರಿಸಿ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡುವ ಮತ್ತು ಸದಸ್ಯರನ್ನು ನೇಮಿಸಿಕೊಳ್ಳುವಲ್ಲಿ ತೊಡಗಿದ್ದ ವ್ಯಕ್ತಿಗಳನ್ನು ಗುರಿಯಾಗಿಸಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.</p><p>ದೇಶದ ವಿವಿಧ ರಾಜ್ಯಗಳಲ್ಲಿ ಐಸಿಸ್ಗೆ ಸಂಬಂಧಿಸಿದ ನೇಮಕಾತಿ ಪ್ರಕರಣಗಳ ಕುರಿತು ಎನ್ಐಎ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ. ಐಸಿಸ್ ಬೆಂಬಲಿಗರ ವಿರುದ್ಧ ಕಳೆದ ವರ್ಷ ದಾಖಲಾದ ಪ್ರಕರಣ ಇದಾಗಿದ್ದು, ತನಿಖೆಯ ವೇಳೆ ಆರೋಪಿಗಳ ಪಾತ್ರ ಬಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>2022ರ ಅಕ್ಟೋಬರ್ನಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಐಸಿಸ್ ಪ್ರೇರಿತ ಕಾರು ಬಾಂಬ್ ಸ್ಫೋಟ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಎನ್ಐಎ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>