ಸೈಬರಾಬಾದ್ ಪೊಲೀಸರು ದೀಪಕ್ ರಾವ್ ಅನ್ನು ಸೆಪ್ಟೆಂಬರ್ನಲ್ಲಿ ಬಂಧಿಸಿದ್ದರು. ಆರೋಪಿ ವಿರುದ್ಧ ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆ, ಯುಎಪಿಎ, ಶಸ್ತ್ರಾಸ್ತ್ರ ಕಾಯ್ದೆಗಳ ವಿವಿಧ ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ವೇಣುಗೋಪಾಲ್ ಅವರನ್ನು 22ನೇ ಆರೋಪಿಯನ್ನಾಗಿಸಲಾಗಿದೆ. ಈ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ತನಿಖೆ ತೀವ್ರಗೊಳಿಸಿದೆ.