<p><strong>ಹೈದರಾಬಾದ್</strong>: ಮಾವೋವಾದಿಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಮೇರೆಗೆ ಹಿರಿಯ ಪತ್ರಕರ್ತ ಎನ್. ವೇಣುಗೋಪಾಲ್ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ರವಿ ಶರ್ಮಾ ಅವರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ತಂಡಗಳು ಗುರುವಾರ ದಾಳಿ ನಡೆಸಿವೆ.</p>.<p>ವೇಣುಗೋಪಾಲ್ ಅವರು ‘ವೀಕ್ಷಣಂ’ ಎಂಬ ಭಾಷಾ ಪತ್ರಿಕೆಯನ್ನು ನಡೆಸುತ್ತಿದ್ದು, ಕೆಲ ಪುಸ್ತಕಗಳನ್ನೂ ಬರೆದಿದ್ದಾರೆ. ಅವರು ಕವಿ ವರವರ ರಾವ್ ಅವರ ಸಂಬಂಧಿ. ವರವರ ರಾವ್ ಅವರು ಭೀಮಾ–ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ.</p>.<p>ಮುಂಜಾನೆ 5 ಗಂಟೆಗೆ ಆರಂಭವಾದ ದಾಳಿಗಳು ಬೆಳಿಗ್ಗೆ 11 ಗಂಟೆಯವರೆಗೂ ನಡೆಯಿತು. ನಿಷೇಧಿತ ಮಾವೋವಾದಿ ಸಂಘಟನೆಯ ಮುಖಂಡ ಸಂಜೋಯ್ ದೀಪಕ್ ರಾವ್ ಜತೆಗೆ ವೇಣುಗೋಪಾಲ್ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆ ಮೇರೆಗೆ ಈ ದಾಳಿ ನಡೆದಿದೆ.</p>.<p>ಸೈಬರಾಬಾದ್ ಪೊಲೀಸರು ದೀಪಕ್ ರಾವ್ ಅನ್ನು ಸೆಪ್ಟೆಂಬರ್ನಲ್ಲಿ ಬಂಧಿಸಿದ್ದರು. ಆರೋಪಿ ವಿರುದ್ಧ ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆ, ಯುಎಪಿಎ, ಶಸ್ತ್ರಾಸ್ತ್ರ ಕಾಯ್ದೆಗಳ ವಿವಿಧ ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ವೇಣುಗೋಪಾಲ್ ಅವರನ್ನು 22ನೇ ಆರೋಪಿಯನ್ನಾಗಿಸಲಾಗಿದೆ. ಈ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ತನಿಖೆ ತೀವ್ರಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಮಾವೋವಾದಿಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಮೇರೆಗೆ ಹಿರಿಯ ಪತ್ರಕರ್ತ ಎನ್. ವೇಣುಗೋಪಾಲ್ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ರವಿ ಶರ್ಮಾ ಅವರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ತಂಡಗಳು ಗುರುವಾರ ದಾಳಿ ನಡೆಸಿವೆ.</p>.<p>ವೇಣುಗೋಪಾಲ್ ಅವರು ‘ವೀಕ್ಷಣಂ’ ಎಂಬ ಭಾಷಾ ಪತ್ರಿಕೆಯನ್ನು ನಡೆಸುತ್ತಿದ್ದು, ಕೆಲ ಪುಸ್ತಕಗಳನ್ನೂ ಬರೆದಿದ್ದಾರೆ. ಅವರು ಕವಿ ವರವರ ರಾವ್ ಅವರ ಸಂಬಂಧಿ. ವರವರ ರಾವ್ ಅವರು ಭೀಮಾ–ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ.</p>.<p>ಮುಂಜಾನೆ 5 ಗಂಟೆಗೆ ಆರಂಭವಾದ ದಾಳಿಗಳು ಬೆಳಿಗ್ಗೆ 11 ಗಂಟೆಯವರೆಗೂ ನಡೆಯಿತು. ನಿಷೇಧಿತ ಮಾವೋವಾದಿ ಸಂಘಟನೆಯ ಮುಖಂಡ ಸಂಜೋಯ್ ದೀಪಕ್ ರಾವ್ ಜತೆಗೆ ವೇಣುಗೋಪಾಲ್ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆ ಮೇರೆಗೆ ಈ ದಾಳಿ ನಡೆದಿದೆ.</p>.<p>ಸೈಬರಾಬಾದ್ ಪೊಲೀಸರು ದೀಪಕ್ ರಾವ್ ಅನ್ನು ಸೆಪ್ಟೆಂಬರ್ನಲ್ಲಿ ಬಂಧಿಸಿದ್ದರು. ಆರೋಪಿ ವಿರುದ್ಧ ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆ, ಯುಎಪಿಎ, ಶಸ್ತ್ರಾಸ್ತ್ರ ಕಾಯ್ದೆಗಳ ವಿವಿಧ ಕಲಂಗಳಡಿ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ವೇಣುಗೋಪಾಲ್ ಅವರನ್ನು 22ನೇ ಆರೋಪಿಯನ್ನಾಗಿಸಲಾಗಿದೆ. ಈ ಪ್ರಕರಣವನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ತನಿಖೆ ತೀವ್ರಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>