<p><strong>ನವದೆಹಲಿ:</strong> ಕೆನಡಾ ಮೂಲದ ಭಯೋತ್ಪಾದಕ ಗೋಲ್ಡಿ ಬ್ರಾರ್ನ ಆಪ್ತರ ಜೊತೆಗೆ ಸಂಪರ್ಕ ಇದ್ದವರಿಗೆ ಸೇರಿದ್ದು ಎನ್ನಲಾದ, ಪಂಜಾಬ್ನ ವಿವಿಧ ಸ್ಥಳಗಳಲ್ಲಿ ರಾಷ್ಟ್ರ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಗುರುವಾರ ಶೋಧ ನಡೆಸಿದರು.</p>.<p>ಉದ್ಯಮಿಗಳಿಂದ ಹಣ ಸುಲಿಗೆ ಮತ್ತು ಗುಂಡಿನ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಶೋಧ ಕಾರ್ಯಾಚರಣೆ ನಡೆಯಿತು ಎಂದು ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.</p>.<p>ಮೊಹಾಲಿ, ಪಟಿಯಾಲ, ಹೋಶಿಯಾಪುರ್, ಫತೇಗರ್ ಸಾಹಿಬ್ನಲ್ಲಿ, ಬ್ರಾರ್ ಮತ್ತು ಆತನ ಸಹಚರರ ಜೊತೆಗೆ ಸಂಪರ್ಕವಿತ್ತು ಎನ್ನಲಾದವರಿಗೆ ಸೇರಿದ್ದ ಒಂಬತ್ತು ತಾಣಗಳಲ್ಲಿ ಶೋಧ ನಡೆಸಿದ್ದು, ಡಿಜಿಟಲ್ ಪರಿಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.</p>.<p>ಕರ್ಣಿ ಸೇನಾ ಮುಖ್ಯಸ್ಥ ಸುಖ್ದೇವ್ ಸಿಂಗ್ ಹತ್ಯೆಗೆ ಸಂಬಂಧಿಸಿದಂತೆ ಬ್ರಾರ್ ಮತ್ತು ಇತರೆ 11 ಜನರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾದ ಮಾರನೇ ದಿನವೇ ಎನ್ಎಐ ಅಧಿಕಾರಿಗಳು ಈ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ.</p>.<p>ರಾಜ್ಯದಲ್ಲಿ ಉದ್ದಿಮೆದಾರರಿಂದ ಹಣ ಸುಲಿಗೆ ಮಾಡಲು ಬ್ರಾರ್ ಮತ್ತು ಗೋಲ್ಡಿ ಅವರು ಕ್ರಿಮಿನಲ್ ಸಂಚು ನಡೆಸಿದ್ದರು. ಬ್ರಾರ್ ರಚಿಸಿಕೊಂಡಿದ್ದ ಉಗ್ರರ ಗುಂಪಿನ ಸದಸ್ಯರಿಗೆ ಶಸ್ತ್ರಾಸ್ತ್ರ ಪೂರೈಸಲಾಗಿತ್ತು ಎಂಬುದು ತನಿಖೆಯಿಂದ ಗೊತ್ತಾಗಿತ್ತು ಎಂದು ಹೇಳಿಕೆ ತಿಳಿಸಿದೆ.</p>.<p>ಮಾಹಿತಿ ಕೋರಿಕೆ: ಗೋಲ್ಡಿ ಬ್ರಾರ್ ಹಾಗೂ ಆತನ ಸಹಚರರ ಕುರಿತು ಮಾಹಿತಿಗಳಿದ್ದರೆ ಹಂಚಿಕೊಳ್ಳಬೇಕು ಎಂದು ಎನ್ಐಎ ಸಾರ್ವಜನಿಕರಿಗೆ ಮನವಿ ಮಾಡಿದೆ.</p>.<p>ಮಾಹಿತಿಗಳಿದ್ದಲ್ಲಿ ದೂರವಾಣಿ ಸಂಖ್ಯೆ (0172-2682901) ಹಾಗೂ ವಾಟ್ಸ್ಆ್ಯಪ್/ಟೆಲಿಗ್ರಾಂ (ಮೊಬೈಲ್ ಸಂಖ್ಯೆ 7743002947) ಮೂಲಕ ಹಂಚಿಕೊಳ್ಳಬೇಕು. ಮಾಹಿತಿದಾರರ ಗುರುತನ್ನು ಗೋಪ್ಯವಾಡಿ ಇಡಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆನಡಾ ಮೂಲದ ಭಯೋತ್ಪಾದಕ ಗೋಲ್ಡಿ ಬ್ರಾರ್ನ ಆಪ್ತರ ಜೊತೆಗೆ ಸಂಪರ್ಕ ಇದ್ದವರಿಗೆ ಸೇರಿದ್ದು ಎನ್ನಲಾದ, ಪಂಜಾಬ್ನ ವಿವಿಧ ಸ್ಥಳಗಳಲ್ಲಿ ರಾಷ್ಟ್ರ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಗುರುವಾರ ಶೋಧ ನಡೆಸಿದರು.</p>.<p>ಉದ್ಯಮಿಗಳಿಂದ ಹಣ ಸುಲಿಗೆ ಮತ್ತು ಗುಂಡಿನ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಶೋಧ ಕಾರ್ಯಾಚರಣೆ ನಡೆಯಿತು ಎಂದು ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.</p>.<p>ಮೊಹಾಲಿ, ಪಟಿಯಾಲ, ಹೋಶಿಯಾಪುರ್, ಫತೇಗರ್ ಸಾಹಿಬ್ನಲ್ಲಿ, ಬ್ರಾರ್ ಮತ್ತು ಆತನ ಸಹಚರರ ಜೊತೆಗೆ ಸಂಪರ್ಕವಿತ್ತು ಎನ್ನಲಾದವರಿಗೆ ಸೇರಿದ್ದ ಒಂಬತ್ತು ತಾಣಗಳಲ್ಲಿ ಶೋಧ ನಡೆಸಿದ್ದು, ಡಿಜಿಟಲ್ ಪರಿಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.</p>.<p>ಕರ್ಣಿ ಸೇನಾ ಮುಖ್ಯಸ್ಥ ಸುಖ್ದೇವ್ ಸಿಂಗ್ ಹತ್ಯೆಗೆ ಸಂಬಂಧಿಸಿದಂತೆ ಬ್ರಾರ್ ಮತ್ತು ಇತರೆ 11 ಜನರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾದ ಮಾರನೇ ದಿನವೇ ಎನ್ಎಐ ಅಧಿಕಾರಿಗಳು ಈ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ.</p>.<p>ರಾಜ್ಯದಲ್ಲಿ ಉದ್ದಿಮೆದಾರರಿಂದ ಹಣ ಸುಲಿಗೆ ಮಾಡಲು ಬ್ರಾರ್ ಮತ್ತು ಗೋಲ್ಡಿ ಅವರು ಕ್ರಿಮಿನಲ್ ಸಂಚು ನಡೆಸಿದ್ದರು. ಬ್ರಾರ್ ರಚಿಸಿಕೊಂಡಿದ್ದ ಉಗ್ರರ ಗುಂಪಿನ ಸದಸ್ಯರಿಗೆ ಶಸ್ತ್ರಾಸ್ತ್ರ ಪೂರೈಸಲಾಗಿತ್ತು ಎಂಬುದು ತನಿಖೆಯಿಂದ ಗೊತ್ತಾಗಿತ್ತು ಎಂದು ಹೇಳಿಕೆ ತಿಳಿಸಿದೆ.</p>.<p>ಮಾಹಿತಿ ಕೋರಿಕೆ: ಗೋಲ್ಡಿ ಬ್ರಾರ್ ಹಾಗೂ ಆತನ ಸಹಚರರ ಕುರಿತು ಮಾಹಿತಿಗಳಿದ್ದರೆ ಹಂಚಿಕೊಳ್ಳಬೇಕು ಎಂದು ಎನ್ಐಎ ಸಾರ್ವಜನಿಕರಿಗೆ ಮನವಿ ಮಾಡಿದೆ.</p>.<p>ಮಾಹಿತಿಗಳಿದ್ದಲ್ಲಿ ದೂರವಾಣಿ ಸಂಖ್ಯೆ (0172-2682901) ಹಾಗೂ ವಾಟ್ಸ್ಆ್ಯಪ್/ಟೆಲಿಗ್ರಾಂ (ಮೊಬೈಲ್ ಸಂಖ್ಯೆ 7743002947) ಮೂಲಕ ಹಂಚಿಕೊಳ್ಳಬೇಕು. ಮಾಹಿತಿದಾರರ ಗುರುತನ್ನು ಗೋಪ್ಯವಾಡಿ ಇಡಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>