<p><strong>ನವದೆಹಲಿ: </strong>ಇಂದು ಬೆಳಗ್ಗೆ ರೈತರು ಪ್ರತಿಭಟನೆ ನಡೆಸುತ್ತಿರುವ ನವದೆಹಲಿಯ ಸಿಂಘು ಗಡಿಯಲ್ಲಿ ಕೈಕತ್ತರಿಸಿದ ಮೃತ ದೇಹ ಪತ್ತೆಯಾದ ಪ್ರಕರಣಕ್ಕೆ ಸಂಜೆ ವೇಳೆಗೆ ಟ್ವಿಸ್ಟ್ ಸಿಕ್ಕಿದೆ. ಆ ಕೊಲೆ ಮಾಡಿದ್ದು ನಾನೇ ಎಂದು ನಿಹಾಂಗ್ ಸಮುದಾಯದ ಸರವಜೀತ್ ಸಿಂಗ್ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.</p>.<p>ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಗುರುತು ಮತ್ತೆ ಮಾಡಲು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಬಳಸಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ಧಾರೆ.</p>.<p>ದೆಹಲಿಯ ಸಿಂಘು ಗಡಿಯಲ್ಲಿ 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆತನ ಒಂದು ಕೈ ಮತ್ತು ಕಾಲುಗಳನ್ನು ಕತ್ತರಿಸಲಾಗಿತ್ತು. ಮೃತದೇಹವನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದ ಬಳಿ ಪೊಲೀಸ್ ಬ್ಯಾರಿಕೇಡ್ಗೆ ಕಟ್ಟಿಹಾಕಲಾಗಿತ್ತು.</p>.<p>ಮೃತನನ್ನು ಲಖಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ ಲಖ್ಬೀರ್ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಯಾವುದೇ ಅಪರಾಧ ಹಿನ್ನೆಲೆ ಅಥವಾ ರಾಜಕೀಯ ಸಂಬಂಧ ಹೊಂದಿಲ್ಲ.</p>.<p>ಇದನ್ನೂ ಓದಿ.. <a href="https://www.prajavani.net/india-news/singhu-border-body-of-man-with-hand-chopped-off-found-near-farmers-protest-site-in-haryanas-kundli-875583.html"><strong>ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ</strong></a></p>.<p>ಲಖಬೀರ್ ಸಿಂಗ್ ಪಂಜಾಬ್ನ ಚೀಮಾ ಖುರ್ದ್ ಹಳ್ಳಿಯ ನಿವಾಸಿಯಾಗಿದ್ದು, ಪತ್ನಿ ಜಸ್ಪ್ರೀತ್ ಕೌರ್, 8,10 ಮತ್ತು 12 ವರ್ಷದ ಮೂವರು ಮಕ್ಕಳನ್ನು ಅಗಲಿದ್ದಾರೆ.</p>.<p>ಶುಕ್ರವಾರ ವ್ಯಕ್ತಿಯನ್ನು ಕೊಂದಿರುವುದಾಗಿ ನಿಹಾಂಗ್ ಗುಂಪು ಒಪ್ಪಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಂದು ಬೆಳಗ್ಗೆ ರೈತರು ಪ್ರತಿಭಟನೆ ನಡೆಸುತ್ತಿರುವ ನವದೆಹಲಿಯ ಸಿಂಘು ಗಡಿಯಲ್ಲಿ ಕೈಕತ್ತರಿಸಿದ ಮೃತ ದೇಹ ಪತ್ತೆಯಾದ ಪ್ರಕರಣಕ್ಕೆ ಸಂಜೆ ವೇಳೆಗೆ ಟ್ವಿಸ್ಟ್ ಸಿಕ್ಕಿದೆ. ಆ ಕೊಲೆ ಮಾಡಿದ್ದು ನಾನೇ ಎಂದು ನಿಹಾಂಗ್ ಸಮುದಾಯದ ಸರವಜೀತ್ ಸಿಂಗ್ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.</p>.<p>ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಗುರುತು ಮತ್ತೆ ಮಾಡಲು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಬಳಸಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ಧಾರೆ.</p>.<p>ದೆಹಲಿಯ ಸಿಂಘು ಗಡಿಯಲ್ಲಿ 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆತನ ಒಂದು ಕೈ ಮತ್ತು ಕಾಲುಗಳನ್ನು ಕತ್ತರಿಸಲಾಗಿತ್ತು. ಮೃತದೇಹವನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದ ಬಳಿ ಪೊಲೀಸ್ ಬ್ಯಾರಿಕೇಡ್ಗೆ ಕಟ್ಟಿಹಾಕಲಾಗಿತ್ತು.</p>.<p>ಮೃತನನ್ನು ಲಖಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ ಲಖ್ಬೀರ್ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಯಾವುದೇ ಅಪರಾಧ ಹಿನ್ನೆಲೆ ಅಥವಾ ರಾಜಕೀಯ ಸಂಬಂಧ ಹೊಂದಿಲ್ಲ.</p>.<p>ಇದನ್ನೂ ಓದಿ.. <a href="https://www.prajavani.net/india-news/singhu-border-body-of-man-with-hand-chopped-off-found-near-farmers-protest-site-in-haryanas-kundli-875583.html"><strong>ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ</strong></a></p>.<p>ಲಖಬೀರ್ ಸಿಂಗ್ ಪಂಜಾಬ್ನ ಚೀಮಾ ಖುರ್ದ್ ಹಳ್ಳಿಯ ನಿವಾಸಿಯಾಗಿದ್ದು, ಪತ್ನಿ ಜಸ್ಪ್ರೀತ್ ಕೌರ್, 8,10 ಮತ್ತು 12 ವರ್ಷದ ಮೂವರು ಮಕ್ಕಳನ್ನು ಅಗಲಿದ್ದಾರೆ.</p>.<p>ಶುಕ್ರವಾರ ವ್ಯಕ್ತಿಯನ್ನು ಕೊಂದಿರುವುದಾಗಿ ನಿಹಾಂಗ್ ಗುಂಪು ಒಪ್ಪಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>