<p><strong>ನವದೆಹಲಿ: </strong>ಕರ್ನಾಟಕ ಸೇರಿದಂತೆ 9 ರಾಜ್ಯಗಳು ‘ಒಂದು ದೇಶ ಒಂದು ಪಡಿತರ ಕಾರ್ಡ್’ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದ್ದು, ಇದರ ಬೆನ್ನಲ್ಲೇ ಈ ರಾಜ್ಯಗಳಿಗೆ ಒಟ್ಟು ₹23,523 ಕೋಟಿಯನ್ನು ಸಾಲವಾಗಿ ಪಡೆಯುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.</p>.<p>ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಕೇರಳ, ತೆಲಂಗಾಣ, ತ್ರಿಪುರ ಹಾಗೂ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಸುಧಾರಣೆ ಪೂರ್ಣಗೊಂಡಿದೆ. ಉತ್ತರ ಪ್ರದೇಶವು ಇದರ ಅತಿ ದೊಡ್ಡ ಫಲಾನುಭವಿಯಾಗಿದ್ದು, ₹4,851 ಕೋಟಿ ಹೆಚ್ಚುವರಿ ಸಾಲ ಪಡೆಯುವ ಅವಕಾಶ ಹೊಂದಿದೆ. ನಂತರದಲ್ಲಿ ಕರ್ನಾಟಕ ₹4,509 ಕೋಟಿ, ಗುಜರಾತ್ ₹4,352 ಕೋಟಿ ಹೆಚ್ಚುವರಿ ಸಾಲ ಪಡೆಯಬಹುದಾಗಿದೆ.</p>.<p>2020 ಡಿ.31ರೊಳಗಾಗಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಲ್ಲಿ ಇತರೆ ರಾಜ್ಯಗಳು ಹೆಚ್ಚುವರಿ ಸಾಲ ಪಡೆಯಲು ಅರ್ಹವಾಗಲಿದೆ. ಈ ಅವಧಿಯೊಳಗೆ ಇನ್ನಷ್ಟು ರಾಜ್ಯಗಳು ಈ ಸುಧಾರಣೆಯನ್ನು ಅನುಷ್ಠಾನಗೊಳಿಸಲಿವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿ ಎಲ್ಲ ಪಡಿತರ ಚೀಟಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬಯೋಮೆಟ್ರಿಕ್ ಹಾಗೂ ಎಲ್ಲ ಪಡಿತರ ಅಂಗಡಿಗಳ ಯಂತ್ರೀಕರಣ(ಅಟೊಮೇಷನ್) ಮುಂತಾದ ಸುಧಾರಣೆ ಮುಖಾಂತರ, ನಕಲಿ ಪಡಿತರಕ್ಕೆ ಕಡಿವಾಣ, ಸೋರಿಕೆಗೆ ತಡೆ ಹಾಕುವ ಉದ್ದೇಶ ಹೊಂದಲಾಗಿದೆ.</p>.<p>ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ರಾಜ್ಯಗಳ ಹಣಕಾಸು ವ್ಯವಸ್ಥೆಯನ್ನು ಸದೃಢಗೊಳಿಸುವ ಉದ್ದೇಶದಿಂದ, 2020–21ರ ಅವಧಿಯಲ್ಲಿ ರಾಜ್ಯದ ಒಟ್ಟು ಆಂತರಿಕ ಉತ್ಪನ್ನದ (ಜಿಎಸ್ಡಿಪಿ) ಶೇ 2ರಷ್ಟನ್ನು ಹೆಚ್ಚುವರಿ ಸಾಲವಾಗಿ ಪಡೆಯಲು ಒಪ್ಪಿಗೆಯನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಶೇ 2ರಲ್ಲಿ, ಶೇ 0.25ನ್ನು ‘ಒಂದು ದೇಶ ಒಂದು ಪಡಿತರ ಕಾರ್ಡ್’ ಅನುಷ್ಠಾನಕ್ಕೆ ಮೀಸಲಿಡಲಾಗಿತ್ತು. ಈ ಮೂಲಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ) ಫಲಾನುಭವಿಗಳಿಗೆ ದೇಶದ ಯಾವುದೇ ಪಡಿತರ ಅಂಗಡಿಗಳಲ್ಲೂ ಪಡಿತರ ಪಡೆಯಲು ಅನುಕೂಲವಾಗಬೇಕು ಎನ್ನುವುದು ಇದರ ಪ್ರಮುಖ ಉದ್ದೇಶ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕರ್ನಾಟಕ ಸೇರಿದಂತೆ 9 ರಾಜ್ಯಗಳು ‘ಒಂದು ದೇಶ ಒಂದು ಪಡಿತರ ಕಾರ್ಡ್’ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದ್ದು, ಇದರ ಬೆನ್ನಲ್ಲೇ ಈ ರಾಜ್ಯಗಳಿಗೆ ಒಟ್ಟು ₹23,523 ಕೋಟಿಯನ್ನು ಸಾಲವಾಗಿ ಪಡೆಯುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.</p>.<p>ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಕೇರಳ, ತೆಲಂಗಾಣ, ತ್ರಿಪುರ ಹಾಗೂ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಸುಧಾರಣೆ ಪೂರ್ಣಗೊಂಡಿದೆ. ಉತ್ತರ ಪ್ರದೇಶವು ಇದರ ಅತಿ ದೊಡ್ಡ ಫಲಾನುಭವಿಯಾಗಿದ್ದು, ₹4,851 ಕೋಟಿ ಹೆಚ್ಚುವರಿ ಸಾಲ ಪಡೆಯುವ ಅವಕಾಶ ಹೊಂದಿದೆ. ನಂತರದಲ್ಲಿ ಕರ್ನಾಟಕ ₹4,509 ಕೋಟಿ, ಗುಜರಾತ್ ₹4,352 ಕೋಟಿ ಹೆಚ್ಚುವರಿ ಸಾಲ ಪಡೆಯಬಹುದಾಗಿದೆ.</p>.<p>2020 ಡಿ.31ರೊಳಗಾಗಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಲ್ಲಿ ಇತರೆ ರಾಜ್ಯಗಳು ಹೆಚ್ಚುವರಿ ಸಾಲ ಪಡೆಯಲು ಅರ್ಹವಾಗಲಿದೆ. ಈ ಅವಧಿಯೊಳಗೆ ಇನ್ನಷ್ಟು ರಾಜ್ಯಗಳು ಈ ಸುಧಾರಣೆಯನ್ನು ಅನುಷ್ಠಾನಗೊಳಿಸಲಿವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿ ಎಲ್ಲ ಪಡಿತರ ಚೀಟಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬಯೋಮೆಟ್ರಿಕ್ ಹಾಗೂ ಎಲ್ಲ ಪಡಿತರ ಅಂಗಡಿಗಳ ಯಂತ್ರೀಕರಣ(ಅಟೊಮೇಷನ್) ಮುಂತಾದ ಸುಧಾರಣೆ ಮುಖಾಂತರ, ನಕಲಿ ಪಡಿತರಕ್ಕೆ ಕಡಿವಾಣ, ಸೋರಿಕೆಗೆ ತಡೆ ಹಾಕುವ ಉದ್ದೇಶ ಹೊಂದಲಾಗಿದೆ.</p>.<p>ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ರಾಜ್ಯಗಳ ಹಣಕಾಸು ವ್ಯವಸ್ಥೆಯನ್ನು ಸದೃಢಗೊಳಿಸುವ ಉದ್ದೇಶದಿಂದ, 2020–21ರ ಅವಧಿಯಲ್ಲಿ ರಾಜ್ಯದ ಒಟ್ಟು ಆಂತರಿಕ ಉತ್ಪನ್ನದ (ಜಿಎಸ್ಡಿಪಿ) ಶೇ 2ರಷ್ಟನ್ನು ಹೆಚ್ಚುವರಿ ಸಾಲವಾಗಿ ಪಡೆಯಲು ಒಪ್ಪಿಗೆಯನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಶೇ 2ರಲ್ಲಿ, ಶೇ 0.25ನ್ನು ‘ಒಂದು ದೇಶ ಒಂದು ಪಡಿತರ ಕಾರ್ಡ್’ ಅನುಷ್ಠಾನಕ್ಕೆ ಮೀಸಲಿಡಲಾಗಿತ್ತು. ಈ ಮೂಲಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ) ಫಲಾನುಭವಿಗಳಿಗೆ ದೇಶದ ಯಾವುದೇ ಪಡಿತರ ಅಂಗಡಿಗಳಲ್ಲೂ ಪಡಿತರ ಪಡೆಯಲು ಅನುಕೂಲವಾಗಬೇಕು ಎನ್ನುವುದು ಇದರ ಪ್ರಮುಖ ಉದ್ದೇಶ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>