ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ ಮತ್ತು ರಾಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರು ನಡ್ಡಾ ಅವರನ್ನು ಶುಕ್ರವಾರ ಸ್ವಾಗತಿಸಿದ್ದಾರೆ.
ಬಿಜೆಪಿಯ ನಾಯಕ ಸಂಬಿತ್ ಪಾತ್ರಾ ಅವರು ಶನಿವಾರ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸಂತೀರ್ಬಜಾರ್ ಉಪವಿಭಾಗದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಡ್ಡಾ ಜೀ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, 'ಸಂಪರ್ಕ್ ಸೆ ಸಮರ್ಥನ್' ಭಾಗವಾಗಿ ಅವರು ಅಗರ್ತಲಾದಲ್ಲಿ ಎರಡು ಪ್ರಭಾವಿ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ.
ನಡ್ಡಾ ಅವರು ಶನಿವಾರ ಮಧ್ಯಾಹ್ನ ತ್ರಿಪುರಾದಿಂದ ಮರಳಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.