<p><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಏಮ್ಸ್ ಐಸಿಎಂಆರ್ನ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯದಲ್ಲಿ ನಿಫಾ ವೈರಸ್ನ ಎರಡು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.</p>.<p>ಸೋಂಕು ತೀವ್ರ ಸ್ವರೂಪದ್ದಾಗಿದ್ದು, ಮಾರಣಾಂತಿಕ ಹಾಗೂ ಕ್ಷಿಪ್ರಗತಿಯಲ್ಲಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.</p>.<p>ಶಂಕಿತ ರೋಗಿಯು ಭಾರತ–ಬಾಂಗ್ಲಾದೇಶ ಗಡಿ ಸಮೀಪದ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಘುಗ್ರಗಾಚಿಗೆ ಪ್ರಯಾಣಿಸಿದ ಇತಿಹಾಸವಿದೆ ಎನ್ನಲಾಗಿದೆ.</p>.<p>ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ, ಕೇಂದ್ರ ಆರೋಗ್ಯ ಕಾರ್ಯದರ್ಶಿಯು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಜೊತೆ ಚರ್ಚಿಸಿ, ಕೇಂದ್ರದ ತಂಡವೊಂದನ್ನು ನಿಯೋಜಿಸಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಮಮತಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು ಎಂದು ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಏಮ್ಸ್ ಐಸಿಎಂಆರ್ನ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯದಲ್ಲಿ ನಿಫಾ ವೈರಸ್ನ ಎರಡು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.</p>.<p>ಸೋಂಕು ತೀವ್ರ ಸ್ವರೂಪದ್ದಾಗಿದ್ದು, ಮಾರಣಾಂತಿಕ ಹಾಗೂ ಕ್ಷಿಪ್ರಗತಿಯಲ್ಲಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.</p>.<p>ಶಂಕಿತ ರೋಗಿಯು ಭಾರತ–ಬಾಂಗ್ಲಾದೇಶ ಗಡಿ ಸಮೀಪದ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಘುಗ್ರಗಾಚಿಗೆ ಪ್ರಯಾಣಿಸಿದ ಇತಿಹಾಸವಿದೆ ಎನ್ನಲಾಗಿದೆ.</p>.<p>ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ, ಕೇಂದ್ರ ಆರೋಗ್ಯ ಕಾರ್ಯದರ್ಶಿಯು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ (ಆರೋಗ್ಯ) ಜೊತೆ ಚರ್ಚಿಸಿ, ಕೇಂದ್ರದ ತಂಡವೊಂದನ್ನು ನಿಯೋಜಿಸಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಮಮತಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು ಎಂದು ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>