<p><strong>ನವದೆಹಲಿ</strong>: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರೂ ಅಪರಾಧಿಗಳನ್ನು ಇದೇ 20ರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಬೇಕು ಎಂದು ಆದೇಶಿಸಿ ದೆಹಲಿ ನ್ಯಾಯಾಲಯ ಗುರುವಾರ ಹೊಸದಾಗಿ ವಾರಂಟ್ ಜಾರಿ ಮಾಡಿದೆ.</p>.<p>ಗಲ್ಲು ಜಾರಿಗೆ ದಿನಾಂಕ ನಿಗದಿ ಮಾಡಲು ಕಾನೂನಾತ್ಮಕವಾಗಿ ಯಾವುದೇ ಅಡ್ಡಿ ಇಲ್ಲ ಎಂದು ಅಪರಾಧಿಗಳ ಪರ ವಕೀಲರು ಇದಕ್ಕೂ ಮೊದಲು ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಕಾನೂನಾತ್ಮಕವಾಗಿ ಎಲ್ಲಾ ಆಯ್ಕೆಗಳು ಮುಗಿದಿವೆ. ದಯಾ ಅರ್ಜಿ ತಿರಸ್ಕರವಾಗಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸುವುದು ಕಾನೂನು ಪರಿಹಾರವಲ್ಲ’ ಎಂದು ಜೈಲಿನ ಪರ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಅಪರಾಧಿಗಳಾದ ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಮತ್ತು ಮುಕೇಶ್ ಕುಮಾರ್ ಸಿಂಗ್ (32) ಈ ಮೊದಲು ಸಲ್ಲಿಸಿದ್ದ ದಯಾ ಅರ್ಜಿಗಳನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು. ಬುಧವಾರ ಪವನ್ ಗುಪ್ತಾ (25) ಸಲ್ಲಿಸಿದ್ದ ಅರ್ಜಿಯೂ ತಿರಸ್ಕಾರಗೊಂಡಿತ್ತು.</p>.<p><strong>ಮಾ.23ಕ್ಕೆ ಅರ್ಜಿ ವಿಚಾರಣೆ:</strong> ನಾಲ್ವರೂ ಅಪರಾಧಿಗಳನ್ನು ಏಕಕಾಲಕ್ಕೆ ಗಲ್ಲಿಗೆ ಏರಿಸಬೇಕು ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇದೇ 23ಕ್ಕೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ವಿಚಾರಣೆಯನ್ನು ಮುಂದೂಡುವುದಿಲ್ಲ ಎಂದು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.</p>.<p><strong>ಜೀವನದ ಬೆಳಗು ನಿರ್ಭಯಾ ತಾಯಿ</strong><br />‘ಮಾರ್ಚ್ 20ರ ಬೆಳಿಗ್ಗೆ ನಮ್ಮ ಜೀವನದ ಬೆಳಗಾಗಲಿದೆ’ ಎಂದು ನಿರ್ಭಯಾ ತಾಯಿ ಆಶಾದೇವಿ ಅವರು ದೆಹಲಿ ಆದೇಶಕ್ಕೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಆ ದಿನ ಅಂತಿಮವಾಗಿ ಗಲ್ಲುಶಿಕ್ಷೆ ಜಾರಿಯಾಗಲಿದೆ ಎನ್ನುವ ವಿಶ್ವಾಸ ಇದೆ. ಅವರನ್ನು ನೇಣಿಗೇರಿಸುವ ತನಕವೂ ನಮ್ಮ ಕಷ್ಟ ಮುಂದುವರಿಯುತ್ತದೆ. ಅವಕಾಶವಿದ್ದರೆ ಅಪರಾಧಿಗಳು ಸಾಯುವುದನ್ನು ನೋಡಬೇಕು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರೂ ಅಪರಾಧಿಗಳನ್ನು ಇದೇ 20ರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಬೇಕು ಎಂದು ಆದೇಶಿಸಿ ದೆಹಲಿ ನ್ಯಾಯಾಲಯ ಗುರುವಾರ ಹೊಸದಾಗಿ ವಾರಂಟ್ ಜಾರಿ ಮಾಡಿದೆ.</p>.<p>ಗಲ್ಲು ಜಾರಿಗೆ ದಿನಾಂಕ ನಿಗದಿ ಮಾಡಲು ಕಾನೂನಾತ್ಮಕವಾಗಿ ಯಾವುದೇ ಅಡ್ಡಿ ಇಲ್ಲ ಎಂದು ಅಪರಾಧಿಗಳ ಪರ ವಕೀಲರು ಇದಕ್ಕೂ ಮೊದಲು ನ್ಯಾಯಾಲಯಕ್ಕೆ ತಿಳಿಸಿದರು.</p>.<p>‘ಕಾನೂನಾತ್ಮಕವಾಗಿ ಎಲ್ಲಾ ಆಯ್ಕೆಗಳು ಮುಗಿದಿವೆ. ದಯಾ ಅರ್ಜಿ ತಿರಸ್ಕರವಾಗಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸುವುದು ಕಾನೂನು ಪರಿಹಾರವಲ್ಲ’ ಎಂದು ಜೈಲಿನ ಪರ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಅಪರಾಧಿಗಳಾದ ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಮತ್ತು ಮುಕೇಶ್ ಕುಮಾರ್ ಸಿಂಗ್ (32) ಈ ಮೊದಲು ಸಲ್ಲಿಸಿದ್ದ ದಯಾ ಅರ್ಜಿಗಳನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು. ಬುಧವಾರ ಪವನ್ ಗುಪ್ತಾ (25) ಸಲ್ಲಿಸಿದ್ದ ಅರ್ಜಿಯೂ ತಿರಸ್ಕಾರಗೊಂಡಿತ್ತು.</p>.<p><strong>ಮಾ.23ಕ್ಕೆ ಅರ್ಜಿ ವಿಚಾರಣೆ:</strong> ನಾಲ್ವರೂ ಅಪರಾಧಿಗಳನ್ನು ಏಕಕಾಲಕ್ಕೆ ಗಲ್ಲಿಗೆ ಏರಿಸಬೇಕು ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇದೇ 23ಕ್ಕೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ವಿಚಾರಣೆಯನ್ನು ಮುಂದೂಡುವುದಿಲ್ಲ ಎಂದು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.</p>.<p><strong>ಜೀವನದ ಬೆಳಗು ನಿರ್ಭಯಾ ತಾಯಿ</strong><br />‘ಮಾರ್ಚ್ 20ರ ಬೆಳಿಗ್ಗೆ ನಮ್ಮ ಜೀವನದ ಬೆಳಗಾಗಲಿದೆ’ ಎಂದು ನಿರ್ಭಯಾ ತಾಯಿ ಆಶಾದೇವಿ ಅವರು ದೆಹಲಿ ಆದೇಶಕ್ಕೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಆ ದಿನ ಅಂತಿಮವಾಗಿ ಗಲ್ಲುಶಿಕ್ಷೆ ಜಾರಿಯಾಗಲಿದೆ ಎನ್ನುವ ವಿಶ್ವಾಸ ಇದೆ. ಅವರನ್ನು ನೇಣಿಗೇರಿಸುವ ತನಕವೂ ನಮ್ಮ ಕಷ್ಟ ಮುಂದುವರಿಯುತ್ತದೆ. ಅವಕಾಶವಿದ್ದರೆ ಅಪರಾಧಿಗಳು ಸಾಯುವುದನ್ನು ನೋಡಬೇಕು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>