<p><strong>ನವದೆಹಲಿ: </strong>ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಇದೇ 14ರಂದು ಮಧ್ಯಾಹ್ನ 1.45ಕ್ಕೆ ನಡೆಯಲಿದೆ.</p>.<p>ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಅರುಣ್ ಮಿಶ್ರಾ, ಆರ್.ಎಫ್. ನರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.</p>.<p>ನ್ಯಾಯಮೂರ್ತಿಗಳ ಕೊಠಡಿಯಲ್ಲಿ ವಿಚಾರಣೆ ನಡೆಯಲಿದೆ.</p>.<p>ಪ್ರಕರಣದ ಅಪರಾಧಿಗಳಾದ ವಿನಯ್ ಶರ್ಮಾ ಮತ್ತು ಮುಕೇಶ್ ಕುಮಾರ್ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಇತರ ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಗುಪ್ತಾ ವಿರುದ್ಧ ದೆಹಲಿಯ ನ್ಯಾಯಾಲಯವು ಮರಣದಂಡನೆ ವಾರಂಟ್ ಜಾರಿ ಮಾಡಿರುವುದರಿಂದ ಅವರು ಪರಿಹಾರಾತ್ಮಕ ಅರ್ಜಿ ಸಲ್ಲಿಸಿಲ್ಲ.</p>.<p>ಅಪರಾಧಿಗಳಿಗೆ ಇದೇ 22ರಂದು ಮರಣ ದಂಡನೆ ಜಾರಿ ಮಾಡುವಂತೆ ದೆಹಲಿಯ ನ್ಯಾಯಾಲಯವು ಮಂಗಳವಾರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಇದೇ 14ರಂದು ಮಧ್ಯಾಹ್ನ 1.45ಕ್ಕೆ ನಡೆಯಲಿದೆ.</p>.<p>ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಅರುಣ್ ಮಿಶ್ರಾ, ಆರ್.ಎಫ್. ನರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.</p>.<p>ನ್ಯಾಯಮೂರ್ತಿಗಳ ಕೊಠಡಿಯಲ್ಲಿ ವಿಚಾರಣೆ ನಡೆಯಲಿದೆ.</p>.<p>ಪ್ರಕರಣದ ಅಪರಾಧಿಗಳಾದ ವಿನಯ್ ಶರ್ಮಾ ಮತ್ತು ಮುಕೇಶ್ ಕುಮಾರ್ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಇತರ ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಗುಪ್ತಾ ವಿರುದ್ಧ ದೆಹಲಿಯ ನ್ಯಾಯಾಲಯವು ಮರಣದಂಡನೆ ವಾರಂಟ್ ಜಾರಿ ಮಾಡಿರುವುದರಿಂದ ಅವರು ಪರಿಹಾರಾತ್ಮಕ ಅರ್ಜಿ ಸಲ್ಲಿಸಿಲ್ಲ.</p>.<p>ಅಪರಾಧಿಗಳಿಗೆ ಇದೇ 22ರಂದು ಮರಣ ದಂಡನೆ ಜಾರಿ ಮಾಡುವಂತೆ ದೆಹಲಿಯ ನ್ಯಾಯಾಲಯವು ಮಂಗಳವಾರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>