‘ಅಪರಾಧಿಗಳ ಪೈಕಿ ಮುಕೇಶ್ ಸಿಂಗ್ ದಯಾ ಅರ್ಜಿ ಸಲ್ಲಿಸಿದ್ದು, ಅದು ಇತ್ಯರ್ಥವಾಗಬೇಕಿದೆ. ಹೀಗಾಗಿ ಅಪರಾಧಿಗಳನ್ನು ಗಲ್ಲಿಗೇರಿಸುವ ಸಂಬಂಧ ಹೊಸ ದಿನಾಂಕ ನಿಗದಿಪಡಿಸುವಂತೆ ಕೋರಿ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ’ ಜೈಲು ಅಧಿಕಾರಿಗಳು ಕೋರ್ಟ್ ಗಮನಕ್ಕೆ ತಂದಾಗ, ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತು.