<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಅವರಿಗಿನ್ನೂ ಕಾನೂನು ಹೋರಾಟದ ಆಯ್ಕೆಗಳಿವೆ ಎಂದು ಅವರಪರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.</p>.<p>‘ಕ್ಯುರೇಟಿವ್ ಪರಿಶೀಲನಾ ಅರ್ಜಿ’ಯೂ ಸೇರಿದಂತೆ ಹಲವು ಆಯ್ಕೆಗಳು ಅಪರಾಧಿಗಳ ಮುಂದಿವೆ. ಇವೆಲ್ಲ ಕೊನೆಗೊಂಡ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯ ಎಂದು ವಕೀಲರು ತಿಳಿಸಿದ್ದಾರೆ.</p>.<p>ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದ್ದ ಕ್ಷಮಾದಾನ ಅರ್ಜಿಯನ್ನು ಅಪರಾಧಿ ವಿನಯ್ ಶರ್ಮಾ ಹಿಂಪಡೆದಿದ್ದಾನೆ. ಕಾನೂನು ಆಯ್ಕೆಗಳಿರುವಾಗ ಸರ್ಕಾರ ಅಥವಾ ಜೈಲು ಅಧಿಕಾರಿಗಳು ತರಾತುರಿಯಲ್ಲಿ ಮರಣದಂಡನೆ ಜಾರಿಗೊಳಿಸಲು ಯತ್ನಿಸುವುದು ಎಷ್ಟು ಸರಿ? ಕಾನೂನು ಎಲ್ಲರಿಗೂ ಒಂದೇ ಎಂದುಸಿಂಗ್ ಹೇಳಿದ್ದಾರೆ.</p>.<p>ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿ.17) ವಿಚಾರಣೆ ನಡೆಸಲಿದೆ. ಹೀಗಾಗಿ ಅದಕ್ಕೂ ಮುನ್ನ ಗಲ್ಲು ಶಿಕ್ಷೆ ಜಾರಿಯಾಗದು ಎಂದು ನಿರ್ಭಯಾ ಪೋಷಕರ ಪರ ವಕೀಲ ಜಿತೇಂದ್ರ ಕುಮಾರ್ ಹೇಳಿದ್ದಾರೆ. ಈ ಕಾನೂನು ಕ್ರಮಗಳು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ವಿಳಂಬ ಮಾಡುವ ತಂತ್ರಗಳು ಎಂದೂ ಅವರು ಹೇಳಿದ್ದಾರೆ.</p>.<p>ಮಂಡೋಲಿ ಜೈಲಿನಲ್ಲಿದ್ದ ಅಪರಾಧಿ ಪವನ್ ಕುಮಾರ್ ಗುಪ್ತ ಎಂಬುವನನ್ನು ತಿಹಾರ್ ಜೈಲಿಗೆ ಮಂಗಳವಾರ ಸ್ಥಳಾಂತರಿಸಲಾಗಿತ್ತು. ಇದು,ಅಪರಾಧಿಗಳನ್ನು ನೇಣಿಗೆ ಹಾಕುವ ಸಿದ್ಧತೆ ನಡೆಯುತ್ತಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿತ್ತು.</p>.<p><a href="https://cms.prajavani.net/stories/national/tihar-jail-asks-up-for-two-hangmen-speculation-over-nirbhaya-killers-execution-689672.html" target="_blank"><strong>ನಿರ್ಭಯಾ ಹಂತಕರ ನೇಣಿಗೆ ದಿನಗಣನೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಅವರಿಗಿನ್ನೂ ಕಾನೂನು ಹೋರಾಟದ ಆಯ್ಕೆಗಳಿವೆ ಎಂದು ಅವರಪರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.</p>.<p>‘ಕ್ಯುರೇಟಿವ್ ಪರಿಶೀಲನಾ ಅರ್ಜಿ’ಯೂ ಸೇರಿದಂತೆ ಹಲವು ಆಯ್ಕೆಗಳು ಅಪರಾಧಿಗಳ ಮುಂದಿವೆ. ಇವೆಲ್ಲ ಕೊನೆಗೊಂಡ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯ ಎಂದು ವಕೀಲರು ತಿಳಿಸಿದ್ದಾರೆ.</p>.<p>ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದ್ದ ಕ್ಷಮಾದಾನ ಅರ್ಜಿಯನ್ನು ಅಪರಾಧಿ ವಿನಯ್ ಶರ್ಮಾ ಹಿಂಪಡೆದಿದ್ದಾನೆ. ಕಾನೂನು ಆಯ್ಕೆಗಳಿರುವಾಗ ಸರ್ಕಾರ ಅಥವಾ ಜೈಲು ಅಧಿಕಾರಿಗಳು ತರಾತುರಿಯಲ್ಲಿ ಮರಣದಂಡನೆ ಜಾರಿಗೊಳಿಸಲು ಯತ್ನಿಸುವುದು ಎಷ್ಟು ಸರಿ? ಕಾನೂನು ಎಲ್ಲರಿಗೂ ಒಂದೇ ಎಂದುಸಿಂಗ್ ಹೇಳಿದ್ದಾರೆ.</p>.<p>ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿ.17) ವಿಚಾರಣೆ ನಡೆಸಲಿದೆ. ಹೀಗಾಗಿ ಅದಕ್ಕೂ ಮುನ್ನ ಗಲ್ಲು ಶಿಕ್ಷೆ ಜಾರಿಯಾಗದು ಎಂದು ನಿರ್ಭಯಾ ಪೋಷಕರ ಪರ ವಕೀಲ ಜಿತೇಂದ್ರ ಕುಮಾರ್ ಹೇಳಿದ್ದಾರೆ. ಈ ಕಾನೂನು ಕ್ರಮಗಳು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ವಿಳಂಬ ಮಾಡುವ ತಂತ್ರಗಳು ಎಂದೂ ಅವರು ಹೇಳಿದ್ದಾರೆ.</p>.<p>ಮಂಡೋಲಿ ಜೈಲಿನಲ್ಲಿದ್ದ ಅಪರಾಧಿ ಪವನ್ ಕುಮಾರ್ ಗುಪ್ತ ಎಂಬುವನನ್ನು ತಿಹಾರ್ ಜೈಲಿಗೆ ಮಂಗಳವಾರ ಸ್ಥಳಾಂತರಿಸಲಾಗಿತ್ತು. ಇದು,ಅಪರಾಧಿಗಳನ್ನು ನೇಣಿಗೆ ಹಾಕುವ ಸಿದ್ಧತೆ ನಡೆಯುತ್ತಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿತ್ತು.</p>.<p><a href="https://cms.prajavani.net/stories/national/tihar-jail-asks-up-for-two-hangmen-speculation-over-nirbhaya-killers-execution-689672.html" target="_blank"><strong>ನಿರ್ಭಯಾ ಹಂತಕರ ನೇಣಿಗೆ ದಿನಗಣನೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>