<p><strong>ಅಹಮದಾಬಾದ್:</strong> ಬ್ಯಾಂಕ್ಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಬಳಿ ವಾರಸುದಾರರಿಲ್ಲದ ₹1.84 ಲಕ್ಷ ಕೋಟಿ ಮೊತ್ತದಷ್ಟು ಆಸ್ತಿ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. </p>.<p>ಶನಿವಾರ ಇಲ್ಲಿ ‘ನಿಮ್ಮ ಹಣ, ನಿಮ್ಮ ಹಕ್ಕು’ ತ್ರೈಮಾಸಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಬ್ಯಾಂಕ್ಗಳಲ್ಲಿ ಠೇವಣಿ, ವಿಮೆ, ಪಿಎಫ್ ಮತ್ತು ಷೇರಿನ ರೂಪದಲ್ಲಿ ಅಪಾರ ಮೊತ್ತದ ಆಸ್ತಿಯ ವಾರಸುದಾರರಿಲ್ಲದೆ ಕೊಳೆಯುತ್ತಿದೆ. ಈ ಹಣವನ್ನು ಅದರ ಸರಿಯಾದ ಮಾಲೀಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಈ ಅಭಿಯಾನದಡಿ ಕೈಗೊಳ್ಳಬೇಕು’ ಎಂದರು. </p>.<p>‘ಈ ಮೊತ್ತಕ್ಕೆ ಸರ್ಕಾರವೇ ಉಸ್ತುವಾರಿ. ಈ ಹಣವು ಸಂಪೂರ್ಣ ಸುರಕ್ಷಿತವಾಗಿದೆ. ಅರ್ಹ ಮಾಲೀಕರು ದಾಖಲೆಗಳೊಂದಿಗೆ ಬಂದರೆ ಬ್ಯಾಂಕ್, ಸೆಬಿ ಅಥವಾ ಇನ್ನಿತರ ಹಣಕಾಸು ಸಂಸ್ಥೆಗಳ ಮೂಲಕ ಈ ಹಣವನ್ನು ವಾಪಸ್ ಪಡೆಯಬಹುದು. ಆರ್ಬಿಐ ಕೂಡ ಇಂತಹ ವಾರಸುದಾರರಿಲ್ಲದ ಖಾತೆ, ಠೇವಣಿಗಳನ್ನುನಿರ್ವಹಿಸಲು ’ಯುಡಿಜಿಎಎಂ’ ಪೋರ್ಟಲ್ ಅಭಿವೃದ್ಧಿಪಡಿಸಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಬ್ಯಾಂಕ್ಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಬಳಿ ವಾರಸುದಾರರಿಲ್ಲದ ₹1.84 ಲಕ್ಷ ಕೋಟಿ ಮೊತ್ತದಷ್ಟು ಆಸ್ತಿ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. </p>.<p>ಶನಿವಾರ ಇಲ್ಲಿ ‘ನಿಮ್ಮ ಹಣ, ನಿಮ್ಮ ಹಕ್ಕು’ ತ್ರೈಮಾಸಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಬ್ಯಾಂಕ್ಗಳಲ್ಲಿ ಠೇವಣಿ, ವಿಮೆ, ಪಿಎಫ್ ಮತ್ತು ಷೇರಿನ ರೂಪದಲ್ಲಿ ಅಪಾರ ಮೊತ್ತದ ಆಸ್ತಿಯ ವಾರಸುದಾರರಿಲ್ಲದೆ ಕೊಳೆಯುತ್ತಿದೆ. ಈ ಹಣವನ್ನು ಅದರ ಸರಿಯಾದ ಮಾಲೀಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಈ ಅಭಿಯಾನದಡಿ ಕೈಗೊಳ್ಳಬೇಕು’ ಎಂದರು. </p>.<p>‘ಈ ಮೊತ್ತಕ್ಕೆ ಸರ್ಕಾರವೇ ಉಸ್ತುವಾರಿ. ಈ ಹಣವು ಸಂಪೂರ್ಣ ಸುರಕ್ಷಿತವಾಗಿದೆ. ಅರ್ಹ ಮಾಲೀಕರು ದಾಖಲೆಗಳೊಂದಿಗೆ ಬಂದರೆ ಬ್ಯಾಂಕ್, ಸೆಬಿ ಅಥವಾ ಇನ್ನಿತರ ಹಣಕಾಸು ಸಂಸ್ಥೆಗಳ ಮೂಲಕ ಈ ಹಣವನ್ನು ವಾಪಸ್ ಪಡೆಯಬಹುದು. ಆರ್ಬಿಐ ಕೂಡ ಇಂತಹ ವಾರಸುದಾರರಿಲ್ಲದ ಖಾತೆ, ಠೇವಣಿಗಳನ್ನುನಿರ್ವಹಿಸಲು ’ಯುಡಿಜಿಎಎಂ’ ಪೋರ್ಟಲ್ ಅಭಿವೃದ್ಧಿಪಡಿಸಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>