ಈ ಕಾಮೆಂಟ್ ವಿವಾದದ ಸ್ವರೂಪವನ್ನು ಪಡೆದುಕೊಂಡ ನಂತರ ಅನೇಕ ಎಡಪರ ಸಂಘಟನೆಗಳು ಕೇರಳದಲ್ಲಿ ಶೈಜಾ ಅವರ ವಿರುದ್ಧ ದೂರು ದಾಖಲಿಸಿವೆ.
ಇನ್ನೊಂದೆಡೆ ಶೈಜಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಎನ್ಐಟಿ ಕ್ಯಾಂಪಸ್ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದೆ.
ಕಾಲೇಜಿನಲ್ಲಿ ಶೈಜಾ ವಿರುದ್ಧ ಮೆರವಣಿಗೆ ನಡೆಸಿ, ಗೋಡ್ಸೆ ಪ್ರತಿಕೃತಿ ದಹನ ಮಾಡಿದೆ. ಅವರನ್ನು ಎನ್ಐಟಿಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದೆ.
ಕುನ್ನಮಂಗಳಂ, ನಾಡಕ್ಕಾವು ಸೇರಿದಂತೆ ಕೆಲವು ಪೊಲೀಸ್ ಠಾಣೆಗಳಲ್ಲಿ ಶೈಜಾ ವಿರುದ್ಧ ಐಪಿಸಿ ಸೆಕ್ಷನ್ 153 ಅಡಿ ದೂರು ದಾಖಲಾಗಿವೆ.