<p><strong>ನವದೆಹಲಿ</strong>: ಉತ್ತರ ಪ್ರದೇಶದ ನೋಯ್ಡಾದಲ್ಲಿ 2006ರಲ್ಲಿ ನಡೆದ ನಿಥಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿದ್ದ 14 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>‘ಅಲಹಾಬಾದ್ ಹೈಕೋರ್ಟ್ನ ತೀರ್ಪಿನಲ್ಲಿ ಯಾವುದೇ ಮತಿಹೀನ ಸಂಗತಿ ಕಾಣಿಸುತ್ತಿಲ್ಲ’ ಎಂದು ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ, ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ಹೇಳಿದೆ.</p>.<p>ಸಾಕ್ಷ್ಯ ಕಾಯ್ದೆಯ ಸೆಕ್ಷನ್ 27ರ ಪ್ರಕಾರ ಸಿಬಿಐನ ತನಿಖೆಯಲ್ಲೇ ಗಂಭೀರ ಲೋಪ ಕಂಡುಬಂದಿದೆ ಎಂದು ಹೇಳಿದೆ. </p>.<p>ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್ ಸಿಂಗ್ ಪಂಧೇರ್ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರ ಎಸಗಿದ ಬಳಿಕ ಕೊಲೆ ಮಾಡಿ ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರ ಪ್ರದೇಶದ ನೋಯ್ಡಾದಲ್ಲಿ 2006ರಲ್ಲಿ ನಡೆದ ನಿಥಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿದ್ದ 14 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>‘ಅಲಹಾಬಾದ್ ಹೈಕೋರ್ಟ್ನ ತೀರ್ಪಿನಲ್ಲಿ ಯಾವುದೇ ಮತಿಹೀನ ಸಂಗತಿ ಕಾಣಿಸುತ್ತಿಲ್ಲ’ ಎಂದು ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ, ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ಹೇಳಿದೆ.</p>.<p>ಸಾಕ್ಷ್ಯ ಕಾಯ್ದೆಯ ಸೆಕ್ಷನ್ 27ರ ಪ್ರಕಾರ ಸಿಬಿಐನ ತನಿಖೆಯಲ್ಲೇ ಗಂಭೀರ ಲೋಪ ಕಂಡುಬಂದಿದೆ ಎಂದು ಹೇಳಿದೆ. </p>.<p>ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್ ಸಿಂಗ್ ಪಂಧೇರ್ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರ ಎಸಗಿದ ಬಳಿಕ ಕೊಲೆ ಮಾಡಿ ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>