<p><strong>ನವದೆಹಲಿ</strong>: 2006ರಲ್ಲಿ ನಡೆದಿದ್ದ ‘ನಿಥಾರಿ ಸರಣಿ ಹತ್ಯೆ’ ಪ್ರಕರಣದಲ್ಲಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿರುವ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ. </p>.<p>ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಬಿಐ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸುರೇಂದ್ರ ಕೋಲಿಗೆ ಸೂಚಿಸಿದೆ. </p>.<p>ಆದೇಶ ಪ್ರಶ್ನಿಸಿ ಕಳೆದ ಮೇನಲ್ಲಿ ಸಂತ್ರಸ್ತರೊಬ್ಬರ ತಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದ ಕೋರ್ಟ್ ಇದೀಗ ಸಿಬಿಐ ಅರ್ಜಿ ವಿಚಾರಣೆಗೂ ಸಮ್ಮತಿಸಿದೆ. </p>.<p>2006ರಲ್ಲಿ ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್ ಸಿಂಗ್ ಪಂಧೇರ್ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರವೆಸಗಿ ಹತ್ಯೆಗೈದು ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.</p>.<p>ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. </p>.<p>ಪಂಧೇರ್ ಜೈಲಿನಿಂದ ಬಿಡುಗಡೆಯಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೋಲಿ ಜೈಲಿನಲ್ಲಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2006ರಲ್ಲಿ ನಡೆದಿದ್ದ ‘ನಿಥಾರಿ ಸರಣಿ ಹತ್ಯೆ’ ಪ್ರಕರಣದಲ್ಲಿ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿರುವ ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ. </p>.<p>ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಬಿಐ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸುರೇಂದ್ರ ಕೋಲಿಗೆ ಸೂಚಿಸಿದೆ. </p>.<p>ಆದೇಶ ಪ್ರಶ್ನಿಸಿ ಕಳೆದ ಮೇನಲ್ಲಿ ಸಂತ್ರಸ್ತರೊಬ್ಬರ ತಂದೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದ ಕೋರ್ಟ್ ಇದೀಗ ಸಿಬಿಐ ಅರ್ಜಿ ವಿಚಾರಣೆಗೂ ಸಮ್ಮತಿಸಿದೆ. </p>.<p>2006ರಲ್ಲಿ ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದಲ್ಲಿ ಅನೇಕ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮೋನಿಂದರ್ ಸಿಂಗ್ ಪಂಧೇರ್ ಮತ್ತು ಸುರೇಂದ್ರ ಕೋಲಿ, ಹೆಣ್ಣುಮಕ್ಕಳನ್ನು ಮನೆಗೆ ಕರೆತಂದು ಅತ್ಯಾಚಾರವೆಸಗಿ ಹತ್ಯೆಗೈದು ಮೃತದೇಹಗಳನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.</p>.<p>ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. </p>.<p>ಪಂಧೇರ್ ಜೈಲಿನಿಂದ ಬಿಡುಗಡೆಯಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೋಲಿ ಜೈಲಿನಲ್ಲಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>