<p><strong>ನವದೆಹಲಿ</strong>: ಪ್ರಧಾನ ಮಂತ್ರಿ ಕಾರ್ಯಾಲಯದ ಚಾಲಕನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ನೀತಿ ಆಯೋಗದ ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಕೂಡಲೇ ತಡೆದು ನಿಲ್ಲಿಸಿದ್ದಾರೆ.</p><p>ವ್ಯಕ್ತಿಯನ್ನು ಸಂಜೀವ್ ಕುಮಾರ್ ಎಂದು ಗುರುತಿಸಲಾಗಿದ್ದು, ನೀರು ಬೇಕೆಂದು ನೀತಿ ಆಯೋಗದ ಆವರಣಕ್ಕೆ ಪ್ರವೇಶಿಸಲು ಯತ್ನಿಸಿದ್ದ. ಗಣರಾಜ್ಯೋತ್ಸವದ ಭದ್ರತೆ ಹಿನ್ನೆಲೆ ಆತನನ್ನು ಗುರುತಿನ ಚೀಟಿ ತೋರಿಸುವಂತೆ ಪ್ರಶ್ನಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಂದರ್ಭ ವ್ಯಕ್ತಿ ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ ನಡೆದಿದೆ. ಬಳಿಕ, ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಂಸದ ಮಾರ್ಗ್ನಲ್ಲಿರುವ ನೀತಿ ಆಯೋಗದ ಕಚೇರಿಯು ಗಣರಾಜ್ಯೋತ್ಸವದಂದು ಪರೇಡ್ ನಡೆಯುವ ಕರ್ತವ್ಯ ಪಥದ ಸಮೀಪದಲ್ಲಿದೆ. ಈ ಪ್ರದೇಶದಲ್ಲಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಪಡೆಗಳನ್ನು ಒಳಗೊಂಡ ಭದ್ರತೆ ಏರ್ಪಡಿಸಲಾಗಿದೆ.</p><p>‘ಪ್ರಮಾಣಿತ ಭದ್ರತಾ ಶಿಷ್ಟಾಚಾರಗಳನ್ನು ಅನುಸರಿಸಲಾಯಿತು. ಆ ಸಮಯದಲ್ಲಿ ಆವರಣದೊಳಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿ ತೃಪ್ತಿಕರ ವಿವರಣೆ ನೀಡದ ಕಾರಣ ಆತನನ್ನು ತಡೆದು ನಿಲ್ಲಿಸಲಾಯಿತು. ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಯೊತು’ಎಂದು ಮೂಲಗಳು ತಿಳಿಸಿವೆ.</p><p>ಪ್ರಾಥಮಿಕ ವಿಚಾರಣೆ ಮತ್ತು ಪರಿಶೀಲನೆಯ ನಂತರ, ಕುಮಾರ್ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ,</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನ ಮಂತ್ರಿ ಕಾರ್ಯಾಲಯದ ಚಾಲಕನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ನೀತಿ ಆಯೋಗದ ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಕೂಡಲೇ ತಡೆದು ನಿಲ್ಲಿಸಿದ್ದಾರೆ.</p><p>ವ್ಯಕ್ತಿಯನ್ನು ಸಂಜೀವ್ ಕುಮಾರ್ ಎಂದು ಗುರುತಿಸಲಾಗಿದ್ದು, ನೀರು ಬೇಕೆಂದು ನೀತಿ ಆಯೋಗದ ಆವರಣಕ್ಕೆ ಪ್ರವೇಶಿಸಲು ಯತ್ನಿಸಿದ್ದ. ಗಣರಾಜ್ಯೋತ್ಸವದ ಭದ್ರತೆ ಹಿನ್ನೆಲೆ ಆತನನ್ನು ಗುರುತಿನ ಚೀಟಿ ತೋರಿಸುವಂತೆ ಪ್ರಶ್ನಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಂದರ್ಭ ವ್ಯಕ್ತಿ ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ ನಡೆದಿದೆ. ಬಳಿಕ, ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಂಸದ ಮಾರ್ಗ್ನಲ್ಲಿರುವ ನೀತಿ ಆಯೋಗದ ಕಚೇರಿಯು ಗಣರಾಜ್ಯೋತ್ಸವದಂದು ಪರೇಡ್ ನಡೆಯುವ ಕರ್ತವ್ಯ ಪಥದ ಸಮೀಪದಲ್ಲಿದೆ. ಈ ಪ್ರದೇಶದಲ್ಲಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಪಡೆಗಳನ್ನು ಒಳಗೊಂಡ ಭದ್ರತೆ ಏರ್ಪಡಿಸಲಾಗಿದೆ.</p><p>‘ಪ್ರಮಾಣಿತ ಭದ್ರತಾ ಶಿಷ್ಟಾಚಾರಗಳನ್ನು ಅನುಸರಿಸಲಾಯಿತು. ಆ ಸಮಯದಲ್ಲಿ ಆವರಣದೊಳಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿ ತೃಪ್ತಿಕರ ವಿವರಣೆ ನೀಡದ ಕಾರಣ ಆತನನ್ನು ತಡೆದು ನಿಲ್ಲಿಸಲಾಯಿತು. ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಯೊತು’ಎಂದು ಮೂಲಗಳು ತಿಳಿಸಿವೆ.</p><p>ಪ್ರಾಥಮಿಕ ವಿಚಾರಣೆ ಮತ್ತು ಪರಿಶೀಲನೆಯ ನಂತರ, ಕುಮಾರ್ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ,</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>