ರಾಜ್ಯಗಳಿಗೆ ನೀಡುವ ಹಣಕಾಸಿನ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀತಿ ಆಯೋಗಕ್ಕೆ ಇಲ್ಲ. ಕೇವಲ ಸಲಹೆ ನೀಡಬಹುದು ಅಷ್ಟೆ. ಇದರಿಂದ ಪ್ರಯೋಜನವಿಲ್ಲ. ಇದರಿಂದಾಗಿ ತಾನು ಪಾಲ್ಗೊಳ್ಳುವುದಿಲ್ಲ. ನಾಲ್ಕೂವರೆ ವರ್ಷದಿಂದ ನೀತಿ ಆಯೋಗದ ಕಾರ್ಯಕ್ರಮಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ಆಯೋಗದ ಅಧಿಕಾರಿಗಳು ಕೇವಲ ಸಾರ್ವಜನಿಕವಾಗಿ ಹೇಳಿಕೆ ಕೊಡಲು ಮಾತ್ರ ಸಾಕು, ಇದರಿಂದ ರಾಜ್ಯಗಳಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.