<p><strong>ನವದೆಹಲಿ:</strong> ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡಬೇಕಿರುವುದರಿಂದ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಯಮಗಳಿಗೆ ಸೋಮವಾರ ಮನವಿ ಮಾಡಿದ್ದಾರೆ. </p>.ವಿಜಯಪುರ–ಹುಬ್ಬಳ್ಳಿ ಹೆದ್ದಾರಿ ಮೇಲ್ದರ್ಜೆಗೆ: ಗಡ್ಕರಿ ಭರವಸೆ.<p>ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ ಹಾಗೂ ಹೆದ್ದಾರಿ ಸಚಿವ ಗಡ್ಕರಿ, ಇನ್ನೆರಡು ವರ್ಷಗಳಲ್ಲಿ ದೇಶದ ಸಾಗಣೆ ವೆಚ್ಚ ಶೇ 9ಕ್ಕೆ ತಗ್ಗಲಿದೆ ಎಂದು ಹೇಳಿದ್ದಾರೆ.</p><p>‘ಜಿಎಸ್ಟಿ ಹಾಗೂ ತೆರಿಗೆ ವಿನಾಯಿತಿ ಕೋರಬೇಡಿ. ತೆರಿಗೆ ನಿರಂತರ ಪ್ರಕ್ರಿಯೆ. ಒಂದು ವೇಳೆ ನಾವು ತೆರಿಗೆ ಕಡಿಮೆ ಮಾಡಿದರೆ, ನೀವು ಇನ್ನೂ ಹೆಚ್ಚಿನದ್ದನ್ನು ಕೇಳುತ್ತೀರಿ. ಇದು ಮಾನವನ ಸಹಜ ಗುಣ’ ಎಂದು ಹೇಳಿದ್ದಾರೆ.</p>.ನಿತಿನ್ ಗಡ್ಕರಿ ಪ್ರಧಾನಿಯಾದರೆ ದೇಶಕ್ಕೆ ಒಳ್ಳೆಯದು: ಸಚಿವ ಸಂತೋಷ್ ಲಾಡ್.<p>‘ತೆರಿಗೆ ಕಡಿಮೆ ಮಾಡಬೇಕು ಎನ್ನುವುದು ನಮಗೂ ಇದೆ. ಆದರೆ ತೆರಿಗೆ ಇಲ್ಲದೆ ಕಲ್ಯಾಣ ಕಾರ್ಯಕ್ರಮಗಳನ್ನು ಕೊಡಲು ಆಗುವುದಿಲ್ಲ. ಶ್ರೀಮಂತರಿಂದ ತೆರಿಗೆ ಪಡೆದುಕೊಂಡು ಬಡವರಿಗೆ ಪ್ರಯೋಜನಗಳನ್ನು ನೀಡುವುದು ಸರ್ಕಾರದ ಕೆಲಸ. ಸರ್ಕಾರಕ್ಕೂ ತನ್ನದೇ ಆದ ಮಿತಿಗಳಿವೆ ’ ಎಂದಿದ್ದಾರೆ.</p><p>‘ಸದ್ಯ ಭಾರತದ ಸಾಗಣೆ ವೆಚ್ಚ ಶೇ 14–15ರಷ್ಟಿದೆ. ಮುಂದಿನ 2 ವರ್ಷಗಳಲ್ಲಿ ಅದು ಶೇ 9ಕ್ಕೆ ಇಳಿಯಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಚೀನಾದ ಸಾಗಣೆ ವೆಚ್ಚ ಶೇ 8ರಷ್ಟಿದೆ. ಅಮೆರಿಕ ಹಾಗೂ ಯೂರೋಪ್ ದೇಶಗಳಲ್ಲಿ ಶೇ 12ರಷ್ಟಿದೆ’ ಎಂದು ಅವರು ಹೇಳಿದ್ದಾರೆ.</p>.ಬಡತನ, ನಿರುದ್ಯೋಗದಿಂದ ಬೇಸತ್ತು ಜನರು ಮಹಾನಗರಗಳಿಗೆ ವಲಸೆ ಹೋಗ್ತಿದ್ದಾರೆ: ಗಡ್ಕರಿ.<p>ದೇಶದಲ್ಲಿ ಹೆಚ್ಚುತ್ತಿರುವ ಬಂಡವಾಳ ಹೂಡಿಕೆಯಿಂದಾಗಿ ಹೆಚ್ಚಿನ ಉದ್ಯೋಗ ಸೃಜನೆಯಾಗುತ್ತಿವೆ. ನೀವು ಸಂಪತ್ತು ಸೃಷ್ಟಿಕರ್ತರು ಮಾತ್ರವಲ್ಲದೆ, ಉದ್ಯೋಗ ಸೃಷ್ಟಿಕರ್ತರೂ ಹೌದು. ಈ ಸುವರ್ಣ ಯುಗದ ಪ್ರಯೋಜನವನ್ನು ನಾವು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.</p>.ಏಕರೂಪದ ಟೋಲ್ ಜಾರಿಗೆ ಚಿಂತನೆ: ನಿತಿನ್ ಗಡ್ಕರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡಬೇಕಿರುವುದರಿಂದ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಯಮಗಳಿಗೆ ಸೋಮವಾರ ಮನವಿ ಮಾಡಿದ್ದಾರೆ. </p>.ವಿಜಯಪುರ–ಹುಬ್ಬಳ್ಳಿ ಹೆದ್ದಾರಿ ಮೇಲ್ದರ್ಜೆಗೆ: ಗಡ್ಕರಿ ಭರವಸೆ.<p>ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ ಹಾಗೂ ಹೆದ್ದಾರಿ ಸಚಿವ ಗಡ್ಕರಿ, ಇನ್ನೆರಡು ವರ್ಷಗಳಲ್ಲಿ ದೇಶದ ಸಾಗಣೆ ವೆಚ್ಚ ಶೇ 9ಕ್ಕೆ ತಗ್ಗಲಿದೆ ಎಂದು ಹೇಳಿದ್ದಾರೆ.</p><p>‘ಜಿಎಸ್ಟಿ ಹಾಗೂ ತೆರಿಗೆ ವಿನಾಯಿತಿ ಕೋರಬೇಡಿ. ತೆರಿಗೆ ನಿರಂತರ ಪ್ರಕ್ರಿಯೆ. ಒಂದು ವೇಳೆ ನಾವು ತೆರಿಗೆ ಕಡಿಮೆ ಮಾಡಿದರೆ, ನೀವು ಇನ್ನೂ ಹೆಚ್ಚಿನದ್ದನ್ನು ಕೇಳುತ್ತೀರಿ. ಇದು ಮಾನವನ ಸಹಜ ಗುಣ’ ಎಂದು ಹೇಳಿದ್ದಾರೆ.</p>.ನಿತಿನ್ ಗಡ್ಕರಿ ಪ್ರಧಾನಿಯಾದರೆ ದೇಶಕ್ಕೆ ಒಳ್ಳೆಯದು: ಸಚಿವ ಸಂತೋಷ್ ಲಾಡ್.<p>‘ತೆರಿಗೆ ಕಡಿಮೆ ಮಾಡಬೇಕು ಎನ್ನುವುದು ನಮಗೂ ಇದೆ. ಆದರೆ ತೆರಿಗೆ ಇಲ್ಲದೆ ಕಲ್ಯಾಣ ಕಾರ್ಯಕ್ರಮಗಳನ್ನು ಕೊಡಲು ಆಗುವುದಿಲ್ಲ. ಶ್ರೀಮಂತರಿಂದ ತೆರಿಗೆ ಪಡೆದುಕೊಂಡು ಬಡವರಿಗೆ ಪ್ರಯೋಜನಗಳನ್ನು ನೀಡುವುದು ಸರ್ಕಾರದ ಕೆಲಸ. ಸರ್ಕಾರಕ್ಕೂ ತನ್ನದೇ ಆದ ಮಿತಿಗಳಿವೆ ’ ಎಂದಿದ್ದಾರೆ.</p><p>‘ಸದ್ಯ ಭಾರತದ ಸಾಗಣೆ ವೆಚ್ಚ ಶೇ 14–15ರಷ್ಟಿದೆ. ಮುಂದಿನ 2 ವರ್ಷಗಳಲ್ಲಿ ಅದು ಶೇ 9ಕ್ಕೆ ಇಳಿಯಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಚೀನಾದ ಸಾಗಣೆ ವೆಚ್ಚ ಶೇ 8ರಷ್ಟಿದೆ. ಅಮೆರಿಕ ಹಾಗೂ ಯೂರೋಪ್ ದೇಶಗಳಲ್ಲಿ ಶೇ 12ರಷ್ಟಿದೆ’ ಎಂದು ಅವರು ಹೇಳಿದ್ದಾರೆ.</p>.ಬಡತನ, ನಿರುದ್ಯೋಗದಿಂದ ಬೇಸತ್ತು ಜನರು ಮಹಾನಗರಗಳಿಗೆ ವಲಸೆ ಹೋಗ್ತಿದ್ದಾರೆ: ಗಡ್ಕರಿ.<p>ದೇಶದಲ್ಲಿ ಹೆಚ್ಚುತ್ತಿರುವ ಬಂಡವಾಳ ಹೂಡಿಕೆಯಿಂದಾಗಿ ಹೆಚ್ಚಿನ ಉದ್ಯೋಗ ಸೃಜನೆಯಾಗುತ್ತಿವೆ. ನೀವು ಸಂಪತ್ತು ಸೃಷ್ಟಿಕರ್ತರು ಮಾತ್ರವಲ್ಲದೆ, ಉದ್ಯೋಗ ಸೃಷ್ಟಿಕರ್ತರೂ ಹೌದು. ಈ ಸುವರ್ಣ ಯುಗದ ಪ್ರಯೋಜನವನ್ನು ನಾವು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.</p>.ಏಕರೂಪದ ಟೋಲ್ ಜಾರಿಗೆ ಚಿಂತನೆ: ನಿತಿನ್ ಗಡ್ಕರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>