<p><strong>ಪಟ್ನಾ:</strong> ‘ಕಾರ್ಯಕರ್ತರ ಏಳ್ಗೆಗೆ ಅವಕಾಶವಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ’ ಎಂದು ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬೀನ್ ಸೋಮವಾರ ಇಲ್ಲಿ ಹೇಳಿದರು.</p>.<p>‘ನನಗೆ ದೊರೆತ ಉನ್ನತ ಹುದ್ದೆಯು ಪಕ್ಷದ ಆಶೀರ್ವಾದ’ ಎಂದು ಇದೇ ಸಂದರ್ಭ ತಿಳಿಸಿದರು.</p>.<p>‘ಬಿಜೆಪಿಯು ಯುವಕರಿಗೆ ಪ್ರೋತ್ಸಾಹ ನೀಡುವ ಜೊತೆಗೆ ದೊಡ್ಡ ಗುರಿ ಸಾಧನೆಗೆ ಸೂಕ್ತ ಮಾರ್ಗದರ್ಶನ ನೀಡಲಿದೆ. ತನ್ನ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಅವಕಾಶ ಕೊಡಲಿದೆ’ ಎಂದು ಹೇಳಿದರು.</p>.<p>‘ಸಂಘಟನೆಯನ್ನು ಬಲಪಡಿಸಲಿಕ್ಕಾಗಿ ಪಕ್ಷದ ಕಾರ್ಯಕರ್ತರು ತಾಳ್ಮೆಯಿಂದ ಕೆಲಸ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ಕಾರ್ಯಕರ್ತರ ಏಳ್ಗೆಗೆ ಅವಕಾಶವಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ’ ಎಂದು ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬೀನ್ ಸೋಮವಾರ ಇಲ್ಲಿ ಹೇಳಿದರು.</p>.<p>‘ನನಗೆ ದೊರೆತ ಉನ್ನತ ಹುದ್ದೆಯು ಪಕ್ಷದ ಆಶೀರ್ವಾದ’ ಎಂದು ಇದೇ ಸಂದರ್ಭ ತಿಳಿಸಿದರು.</p>.<p>‘ಬಿಜೆಪಿಯು ಯುವಕರಿಗೆ ಪ್ರೋತ್ಸಾಹ ನೀಡುವ ಜೊತೆಗೆ ದೊಡ್ಡ ಗುರಿ ಸಾಧನೆಗೆ ಸೂಕ್ತ ಮಾರ್ಗದರ್ಶನ ನೀಡಲಿದೆ. ತನ್ನ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಅವಕಾಶ ಕೊಡಲಿದೆ’ ಎಂದು ಹೇಳಿದರು.</p>.<p>‘ಸಂಘಟನೆಯನ್ನು ಬಲಪಡಿಸಲಿಕ್ಕಾಗಿ ಪಕ್ಷದ ಕಾರ್ಯಕರ್ತರು ತಾಳ್ಮೆಯಿಂದ ಕೆಲಸ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>