<p><strong>ನವದೆಹಲಿ:</strong> ‘ಭಾರತದ ಸಂವಿಧಾನವು ದೇಶದ ಆತ್ಮವಾಗಿದೆ. ಇದು ಸ್ವಾತಂತ್ರ್ಯಾ ನಂತರ ದೇಶವನ್ನು ಬಲಿಷ್ಠವಾದ, ಎಲ್ಲರನ್ನೂ ಒಳಗೊಂಡಂತಹ ಪ್ರಜಾಪ್ರಭುತ್ವ, ಗಣರಾಜ್ಯವಾಗಿ ಮುಂದುವರಿಯಲು ನಿರ್ದೇಶಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ತಿಳಿಸಿದರು.</p>.<p>ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿರುವ ಅವರು, ‘ಶ್ರೇಷ್ಠ ಸಂವಿಧಾನದ ಕಾರಣ ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ವಿಶಿಷ್ಟ ಗುರುತನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಆತ್ಮವಿಶ್ವಾಸದಿಂದ ಕೂಡಿದ್ದು, ನಿರ್ಣಾಯಕ ದೇಶವಾಗಿ ಹೊರಹೊಮ್ಮುತ್ತಿದೆ’ ಎಂದು ಹೇಳಿದರು.</p>.<p>ಗಣರಾಜ್ಯೋತ್ಸವದ ಸಂದರ್ಭವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದ ಮೌಲ್ಯಗಳನ್ನು ಸ್ಮರಿಸುವ ದಿನವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಸಂವಿಧಾನ ನಿರ್ಮಾತೃಗಳ ದೂರದೃಷ್ಟಿ ಮತ್ತು ದೇಶದ ಭದ್ರತೆಗೆ ಸಮರ್ಪಿತವಾದ ಸಶಸ್ತ್ರ ಪಡೆಗಳ ಧರ್ಯಕ್ಕೆ ಗೌರವ ಸಲ್ಲಿಸುವ ದಿನವೂ ಇದಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತದ ಸಂವಿಧಾನವು ದೇಶದ ಆತ್ಮವಾಗಿದೆ. ಇದು ಸ್ವಾತಂತ್ರ್ಯಾ ನಂತರ ದೇಶವನ್ನು ಬಲಿಷ್ಠವಾದ, ಎಲ್ಲರನ್ನೂ ಒಳಗೊಂಡಂತಹ ಪ್ರಜಾಪ್ರಭುತ್ವ, ಗಣರಾಜ್ಯವಾಗಿ ಮುಂದುವರಿಯಲು ನಿರ್ದೇಶಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ತಿಳಿಸಿದರು.</p>.<p>ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿರುವ ಅವರು, ‘ಶ್ರೇಷ್ಠ ಸಂವಿಧಾನದ ಕಾರಣ ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ವಿಶಿಷ್ಟ ಗುರುತನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಆತ್ಮವಿಶ್ವಾಸದಿಂದ ಕೂಡಿದ್ದು, ನಿರ್ಣಾಯಕ ದೇಶವಾಗಿ ಹೊರಹೊಮ್ಮುತ್ತಿದೆ’ ಎಂದು ಹೇಳಿದರು.</p>.<p>ಗಣರಾಜ್ಯೋತ್ಸವದ ಸಂದರ್ಭವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದ ಮೌಲ್ಯಗಳನ್ನು ಸ್ಮರಿಸುವ ದಿನವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಸಂವಿಧಾನ ನಿರ್ಮಾತೃಗಳ ದೂರದೃಷ್ಟಿ ಮತ್ತು ದೇಶದ ಭದ್ರತೆಗೆ ಸಮರ್ಪಿತವಾದ ಸಶಸ್ತ್ರ ಪಡೆಗಳ ಧರ್ಯಕ್ಕೆ ಗೌರವ ಸಲ್ಲಿಸುವ ದಿನವೂ ಇದಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>