<p><strong>ಪಣಜಿ:</strong> ಬೂತ್ ಮಟ್ದದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ‘2027ರಲ್ಲಿ ನಡೆಯುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಬೂತ್ನಲ್ಲಿ ಕನಿಷ್ಠ ಶೇಕಡ 50ರಷ್ಟು ಮತಗಳನ್ನು ಪಡೆಯುವ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದರು.</p>.<p>ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 2027ರ ಚುನಾವಣೆಯು ‘ವಿಕಸಿತ ಗೋವಾ’ದ ದೂರದೃಷ್ಟಿ ಸಾಧನೆಗೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಸ್ಥಿರ ಸರ್ಕಾರ ಮುಂದುವರಿಯಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಪಕ್ಷದ ಸಂಘಟನೆಯಲ್ಲಿ ಬೂತ್ ಹಂತದ ಮುಖ್ಯಸ್ಥರದ್ದು ಮಹತ್ವದ ಪಾತ್ರ. ತಳಮಟ್ಟದಲ್ಲಿ ಜನರ ಬೆಂಬಲ ಪಡೆಯುವ ಮೂಲಕ ಅವರು ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಹೇಳಿದರು.</p>.<p>ಬಿಜೆಪಿ ಕೇಡರ್ ಆಧಾರಿತ ಪಕ್ಷವಾಗಿದ್ದು, ಬೂತ್ ಮಟ್ಟದ ಅಧ್ಯಕ್ಷರು ಮುಖ್ಯಮಂತ್ರಿ, ಪ್ರಧಾನಿ ಸೇರಿದಂತೆ ಅತ್ಯುನ್ನತ ನಾಯಕತ್ವದ ಹುದ್ದೆಗಳನ್ನು ಅಲಂಕರಿಸಲು ಅವಕಾಶಗಳಿವೆ ಎಂದರು.</p>.<p>‘ಗ್ರಾಮೀಣ ಮತ್ತು ಬಡ ಜನರು ಬಲಿಷ್ಠವಾದರೆ ಬಿಜೆಪಿ ಬಲಿಷ್ಠವಾಗುತ್ತದೆ. ಇದು ಕ್ರಮೇಣ ರಾಜ್ಯ ಮತ್ತು ದೇಶದ ಪ್ರಗತಿಗೂ ಕಾರಣವಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನಂಬಿಕೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ’ ಎಂದು ಅವರು ಕರೆ ನೀಡಿದರು. </p>.<p>ಗೋವಾದ ಜನರ ತಲಾ ಆದಾಯವು 2014ರಲ್ಲಿ ₹1.12 ಲಕ್ಷ ಇತ್ತು. ಅದು 2023–24ರ ವೇಳೆಗೆ ₹3 ಲಕ್ಷಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮೂಲಸೌಕರ್ಯ ವೃದ್ಧಿಯಾಗಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದರು. </p>.<p>ಸಮಾವೇಶ ಮಾತನಾಡಿದ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ‘ರಾಜ್ಯದಲ್ಲಿ 2027ರಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುವುದು ಖಚಿತ’ ಎಂದರು.</p>.<p>‘ರಾಜಕೀಯವು 100 ಮೀಟರ್ ಓಟದ ಸ್ಪರ್ಧೆಯಲ್ಲ, ಅದು ಮ್ಯಾರಥಾನ್ ಓಟ. ಇದರಲ್ಲಿ ವೇಗದ ಬದಲಿಗೆ ಮನೋಬಲದ ಪರೀಕ್ಷೆ ಆಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಬೂತ್ ಮಟ್ದದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ‘2027ರಲ್ಲಿ ನಡೆಯುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಬೂತ್ನಲ್ಲಿ ಕನಿಷ್ಠ ಶೇಕಡ 50ರಷ್ಟು ಮತಗಳನ್ನು ಪಡೆಯುವ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದರು.</p>.<p>ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 2027ರ ಚುನಾವಣೆಯು ‘ವಿಕಸಿತ ಗೋವಾ’ದ ದೂರದೃಷ್ಟಿ ಸಾಧನೆಗೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಸ್ಥಿರ ಸರ್ಕಾರ ಮುಂದುವರಿಯಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಪಕ್ಷದ ಸಂಘಟನೆಯಲ್ಲಿ ಬೂತ್ ಹಂತದ ಮುಖ್ಯಸ್ಥರದ್ದು ಮಹತ್ವದ ಪಾತ್ರ. ತಳಮಟ್ಟದಲ್ಲಿ ಜನರ ಬೆಂಬಲ ಪಡೆಯುವ ಮೂಲಕ ಅವರು ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಹೇಳಿದರು.</p>.<p>ಬಿಜೆಪಿ ಕೇಡರ್ ಆಧಾರಿತ ಪಕ್ಷವಾಗಿದ್ದು, ಬೂತ್ ಮಟ್ಟದ ಅಧ್ಯಕ್ಷರು ಮುಖ್ಯಮಂತ್ರಿ, ಪ್ರಧಾನಿ ಸೇರಿದಂತೆ ಅತ್ಯುನ್ನತ ನಾಯಕತ್ವದ ಹುದ್ದೆಗಳನ್ನು ಅಲಂಕರಿಸಲು ಅವಕಾಶಗಳಿವೆ ಎಂದರು.</p>.<p>‘ಗ್ರಾಮೀಣ ಮತ್ತು ಬಡ ಜನರು ಬಲಿಷ್ಠವಾದರೆ ಬಿಜೆಪಿ ಬಲಿಷ್ಠವಾಗುತ್ತದೆ. ಇದು ಕ್ರಮೇಣ ರಾಜ್ಯ ಮತ್ತು ದೇಶದ ಪ್ರಗತಿಗೂ ಕಾರಣವಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನಂಬಿಕೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ’ ಎಂದು ಅವರು ಕರೆ ನೀಡಿದರು. </p>.<p>ಗೋವಾದ ಜನರ ತಲಾ ಆದಾಯವು 2014ರಲ್ಲಿ ₹1.12 ಲಕ್ಷ ಇತ್ತು. ಅದು 2023–24ರ ವೇಳೆಗೆ ₹3 ಲಕ್ಷಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮೂಲಸೌಕರ್ಯ ವೃದ್ಧಿಯಾಗಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದರು. </p>.<p>ಸಮಾವೇಶ ಮಾತನಾಡಿದ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ‘ರಾಜ್ಯದಲ್ಲಿ 2027ರಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುವುದು ಖಚಿತ’ ಎಂದರು.</p>.<p>‘ರಾಜಕೀಯವು 100 ಮೀಟರ್ ಓಟದ ಸ್ಪರ್ಧೆಯಲ್ಲ, ಅದು ಮ್ಯಾರಥಾನ್ ಓಟ. ಇದರಲ್ಲಿ ವೇಗದ ಬದಲಿಗೆ ಮನೋಬಲದ ಪರೀಕ್ಷೆ ಆಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>