<p><strong>ಪಟ್ನಾ</strong>: ನೇಮಕಾತಿ ಪತ್ರ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಜಾಬ್ ತೆಗೆದಿದ್ದರಿಂದ ಮುಜುಗರ ಅನುಭವಿಸಿದ್ದ ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಅವರು ಕರ್ತವ್ಯಕ್ಕೆ ಬುಧವಾರ ವರದಿ ಮಾಡಿಕೊಂಡಿದ್ದಾರೆ. </p>.<p>‘ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಬುಧವಾರ ಕೊನೆಯ ದಿನವಾಗಿತ್ತು. ಈ ದಿನವೇ ನುಸ್ರತ್ ಕರ್ತವ್ಯಕ್ಕೆ ಸೇರಿದ್ದಾರೆ’ ಎಂದು ಸರ್ಕಾರಿ ತಿಬ್ಬಿ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಚಾರ್ಯ ಮಹಫೂಜುರ್ ರಹಮಾನ್ ತಿಳಿಸಿದ್ದಾರೆ. </p>.<p>ಡಿಸೆಂಬರ್ 15ರಂದು ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ವೈದ್ಯೆ ನುಸ್ರತ್ ಪರ್ವೀನ್ ಅವರು ಮುಖವನ್ನು ಮರೆಮಾಚುವ ರೀತಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದರು. ಅವರಿಗೆ ನೇಮಕಾತಿ ಪತ್ರ ನೀಡುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್, ಮುಖದ ಮೇಲಿನ ಬಟ್ಟೆಯನ್ನು ಏಕಾಏಕಿ ಹಿಡಿದೆಳೆದಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತಲ್ಲದೇ, ಭಾರಿ ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ನೇಮಕಾತಿ ಪತ್ರ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಜಾಬ್ ತೆಗೆದಿದ್ದರಿಂದ ಮುಜುಗರ ಅನುಭವಿಸಿದ್ದ ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಅವರು ಕರ್ತವ್ಯಕ್ಕೆ ಬುಧವಾರ ವರದಿ ಮಾಡಿಕೊಂಡಿದ್ದಾರೆ. </p>.<p>‘ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಬುಧವಾರ ಕೊನೆಯ ದಿನವಾಗಿತ್ತು. ಈ ದಿನವೇ ನುಸ್ರತ್ ಕರ್ತವ್ಯಕ್ಕೆ ಸೇರಿದ್ದಾರೆ’ ಎಂದು ಸರ್ಕಾರಿ ತಿಬ್ಬಿ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಚಾರ್ಯ ಮಹಫೂಜುರ್ ರಹಮಾನ್ ತಿಳಿಸಿದ್ದಾರೆ. </p>.<p>ಡಿಸೆಂಬರ್ 15ರಂದು ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ವೈದ್ಯೆ ನುಸ್ರತ್ ಪರ್ವೀನ್ ಅವರು ಮುಖವನ್ನು ಮರೆಮಾಚುವ ರೀತಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದರು. ಅವರಿಗೆ ನೇಮಕಾತಿ ಪತ್ರ ನೀಡುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್, ಮುಖದ ಮೇಲಿನ ಬಟ್ಟೆಯನ್ನು ಏಕಾಏಕಿ ಹಿಡಿದೆಳೆದಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತಲ್ಲದೇ, ಭಾರಿ ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>