<p><strong>ಪಟ್ನಾ</strong>: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎ ಮೈತ್ರಿಕೂಟದಲ್ಲಿ ಉಳಿಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಭರವಸೆ ನೀಡಿದ್ದಾರೆ.</p><p>ಈ ಹಿಂದೆ ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಅಧಿಕಾರ ಹಂಚಿಕೊಂಡ ಸಂದರ್ಭವನ್ನೂ ಮೆಲುಕು ಹಾಕಿದ ನಿತೀಶ್ ವಿಷಾದ ವ್ಯಕ್ತಪಡಿಸಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆ ಎಲ್ಲಾ ಪಕ್ಷಗಳು ರಾಜಕೀಯ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ರ್ಯಾಲಿಗಳನ್ನು ಆಯೋಜಿಸಲಾಗುತ್ತಿದೆ. </p>.ಭಾರತಕ್ಕೆ ಅಮೆರಿಕದ ಮುಖ್ಯ ವ್ಯಾಪಾರ ಸಮಾಲೋಚಕ: ನಾಳೆ ಮಾತುಕತೆ.ಗೆಳತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಭಾರತ-ನೇಪಾಳ ಗಡಿಯಲ್ಲಿ ಬಂಧನ!. <p>ಪೂರ್ಣಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್, 2005ರಲ್ಲಿ ಜೆಡಿಯು ಹಾಗೂ ಬಿಜೆಪಿ ಮೈತ್ರಿಕೂಟ ಸರ್ಕಾರ ರಚಿಸಿತ್ತು. ಆ ಬಳಿಕ ನಮ್ಮದೇ ಪಕ್ಷದ ಕೆಲವು ನಾಯಕರ ಮಾತು ಕೇಳಿ ಮತ್ತೊಂದು ಮೈತ್ರಿಕೂಟದ ಭಾಗವಾಗಬೇಕಾಯಿತು ಎಂದು ಹೇಳಿದ್ದಾರೆ.</p><p>'ಅವರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದ್ದ ವೇಳೆ ಎಂದಿಗೂ ನೆಮ್ಮದಿಯಾಗಿರಲಿಲ್ಲ. ಆ ಜನರು ಯಾವಾಗಲೂ ಕಿಡಿಗೇಡಿತನದಲ್ಲಿ ತೊಡಗಿದ್ದರು' ಎಂದು ನಿತೀಶ್ ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.</p><p>ನಾನು ಈಗ ಎನ್ಡಿಎ ಮೈತ್ರಿಕೂಟಕ್ಕೆ ಹಿಂತಿರುಗಿದ್ದೇನೆ. ಇನ್ನು ಮುಂದೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ನಿತೀಶ್ ಪ್ರಧಾನಿ ಮೋದಿ ಎದುರು ಹೇಳಿದ್ದಾರೆ.</p>.ಮಾಲಿನ್ಯದಿಂದ ಐತಿಹಾಸಿಕ ಕೆಂಪು ಕೋಟೆಗೆ ಹೆಚ್ಚಿದ ಹಾನಿ: ಅಧ್ಯಯನ .ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಮಹೋತ್ಸವ.Bihar Election 2025 | ₹36,000 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ.ಸ್ವಂತ ಅಣ್ಣನಂತೆ ಮದ್ವೆ ಮಾಡಿಸಿದ್ರು: ನಿರ್ಮಾಪಕರ ನೆನೆದು ಕಣ್ಣೀರಿಟ್ಟ ಅನುಶ್ರೀ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎ ಮೈತ್ರಿಕೂಟದಲ್ಲಿ ಉಳಿಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಭರವಸೆ ನೀಡಿದ್ದಾರೆ.</p><p>ಈ ಹಿಂದೆ ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಅಧಿಕಾರ ಹಂಚಿಕೊಂಡ ಸಂದರ್ಭವನ್ನೂ ಮೆಲುಕು ಹಾಕಿದ ನಿತೀಶ್ ವಿಷಾದ ವ್ಯಕ್ತಪಡಿಸಿದ್ದಾರೆ.</p><p>ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆ ಎಲ್ಲಾ ಪಕ್ಷಗಳು ರಾಜಕೀಯ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ರ್ಯಾಲಿಗಳನ್ನು ಆಯೋಜಿಸಲಾಗುತ್ತಿದೆ. </p>.ಭಾರತಕ್ಕೆ ಅಮೆರಿಕದ ಮುಖ್ಯ ವ್ಯಾಪಾರ ಸಮಾಲೋಚಕ: ನಾಳೆ ಮಾತುಕತೆ.ಗೆಳತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಭಾರತ-ನೇಪಾಳ ಗಡಿಯಲ್ಲಿ ಬಂಧನ!. <p>ಪೂರ್ಣಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್, 2005ರಲ್ಲಿ ಜೆಡಿಯು ಹಾಗೂ ಬಿಜೆಪಿ ಮೈತ್ರಿಕೂಟ ಸರ್ಕಾರ ರಚಿಸಿತ್ತು. ಆ ಬಳಿಕ ನಮ್ಮದೇ ಪಕ್ಷದ ಕೆಲವು ನಾಯಕರ ಮಾತು ಕೇಳಿ ಮತ್ತೊಂದು ಮೈತ್ರಿಕೂಟದ ಭಾಗವಾಗಬೇಕಾಯಿತು ಎಂದು ಹೇಳಿದ್ದಾರೆ.</p><p>'ಅವರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದ್ದ ವೇಳೆ ಎಂದಿಗೂ ನೆಮ್ಮದಿಯಾಗಿರಲಿಲ್ಲ. ಆ ಜನರು ಯಾವಾಗಲೂ ಕಿಡಿಗೇಡಿತನದಲ್ಲಿ ತೊಡಗಿದ್ದರು' ಎಂದು ನಿತೀಶ್ ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.</p><p>ನಾನು ಈಗ ಎನ್ಡಿಎ ಮೈತ್ರಿಕೂಟಕ್ಕೆ ಹಿಂತಿರುಗಿದ್ದೇನೆ. ಇನ್ನು ಮುಂದೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ನಿತೀಶ್ ಪ್ರಧಾನಿ ಮೋದಿ ಎದುರು ಹೇಳಿದ್ದಾರೆ.</p>.ಮಾಲಿನ್ಯದಿಂದ ಐತಿಹಾಸಿಕ ಕೆಂಪು ಕೋಟೆಗೆ ಹೆಚ್ಚಿದ ಹಾನಿ: ಅಧ್ಯಯನ .ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಮಹೋತ್ಸವ.Bihar Election 2025 | ₹36,000 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ.ಸ್ವಂತ ಅಣ್ಣನಂತೆ ಮದ್ವೆ ಮಾಡಿಸಿದ್ರು: ನಿರ್ಮಾಪಕರ ನೆನೆದು ಕಣ್ಣೀರಿಟ್ಟ ಅನುಶ್ರೀ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>