ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಉಪ ಮುಖ್ಯಮಂತ್ರಿಯಾಗಿಪ್ರಮಾಣವಚನ ಸ್ವೀಕರಿಸಿದರು.
Nitish Kumar takes oath as Bihar CM for 8th time, after he announced a new "grand alliance" with Tejashwi Yadav's RJD & other opposition parties pic.twitter.com/btHWJURsul
ಎರಡನೇ ಬಾರಿಗೆ ಆರ್ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನದಲ್ಲಿಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರು.
ಪ್ರಮಾಣವಚನ ಸಮಾರಂಭದಲ್ಲಿತೇಜಸ್ವಿ ಯಾದವ್ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ,ಆರ್ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.
ನಿನ್ನೆಬಿಜೆಪಿ ಜೊತೆಮೈತ್ರಿ ಕಡಿದುಕೊಂಡುನಿತೀಶ್ ಕುಮಾರ್ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬುಧವಾರಮಹಾಘಟಬಂಧನ್ ಸರ್ಕಾರದ ಮುಖ್ಯಮಂತ್ರಿಯಾದರು. ಅವರು 8ನೇ ಬಾರಿಗೆ ಸಿಎಂ ಆಗಿರುವುದು ವಿಶೇಷ.